- Advertisement -
- Advertisement -
ದೇಶದ ಜನ ನೆಮ್ಮದಿಯಾಗಿ, ಸಂತೋಷವಾಗಿದ್ದರೆ ಬಿಜೆಪಿಯ ನೆಮ್ಮದಿ ಹಾಳಾಗುತ್ತದೆ. ಈಗ ನಾವು ಬಿಜೆಪಿ ಕಾಲದ ಎಲ್ಲಾ ಹಗರಣಗಳು, ಭ್ರಷ್ಟಾಚಾರದ ತನಿಖೆ ಆರಂಭಿಸಿದ್ದು,ಸದ್ಯದಲ್ಲೇ ಬಿಜೆಪಿ ಬೇಳೆಕಾಳು ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, 2024 ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸೋಲುತ್ತದೆ. ಪ್ರಧಾನಿ ಮೋದಿ ಪಾರ್ಲಿಮೆಂಟ್ ಗೆ ಸರಿಯಾಗಿ ಹೋಗುವಿದಿಲ್ಲ ಹಾಗೂ , ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಲ್ಲ. ಬರೀ ಮನ್ ಕಿ ಬಾತ್. ಆ ಬಾತ್ ನಲ್ಲೂ ದೇಶದ ಜನ ಇರೋದಿಲ್ಲ ಎಂದು ಹೇಳಿದ್ದಾರೆ
ಇನ್ನು ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ ಎಂದು ಹೇಳಿದ್ದಾರೆ.
- Advertisement -