- Advertisement -
- Advertisement -
ಬಂಟ್ವಾಳ: ಸಾಲದ ಬಾಧೆ ಎಂಬ ಕಾರಣಕ್ಕಾಗಿ ಚೀಟಿ ಬರೆದು ಉದ್ಯಮಿಯೋರ್ವರು ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿ ರೋಡ್ನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕನಪಾದೆ ನಿವಾಸಿ ಕೃಷ್ಣ ಟಿ. ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಬಿಸಿರೋಡಿನ ಕೃಷ್ಣ ಪ್ರೈಮ್ ಹೋಟೆಲ್ ನ ರೂಮ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಐಸ್ ಕ್ರೀಂ ಒಂದರ ಮಾಲಕರಾಗಿದ್ದು ಜೊತೆಗೆ ಕ್ಲಬ್ ಕೂಡಾ ನಡೆಸುತ್ತಿದ್ದರು. ಉದ್ಯಮದಲ್ಲಿ ನಷ್ಟವಾಗಿದ್ದು, ಸಾಲದ ಬಾಧೆಯಿಂದ ಎಂಬ ಕಾರಣವನ್ನು ಚೀಟಿಯಲ್ಲಿ ಬರೆದು ಕಿಸೆಯಲ್ಲಿಟ್ಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -