- Advertisement -
- Advertisement -


ಬೆಂಕಿ ನಂದಿಸುವ ವೇಳೆ ಅರಣ್ಯದ ಕಾವಲುಗಾರ ಹೈವೊಲ್ಟೇಜ್ ವಿದ್ಯುತ್ ಸಂಪರ್ಕವಿದ್ದ ತಂತಿಗೆ ತಗುಲಿ ಮೃತಪಟ್ಟ ಘಟನೆ ನಡೆದಿದೆ. ಇಡುಗುಂದಿ ವಲಯ ಅರಣ್ಯ ವ್ಯಾಪ್ತಿಯ ತೆಲಂಗಾರದಲ್ಲಿ ಈ ಅವಘಡ ಸಂಭವಿಸಿದೆ. ಅರಣ್ಯ ವೀಕ್ಷಕರಾಗಿ ಕೆಲಸ ನಿರ್ವಹಿಸುತ್ತಿರುವ ವಜ್ರಳ್ಳಿ ನಿವಾಸಿ ಜೂಜೆ ಲೂಯಿಸ್ ಸಿದ್ದಿ (64) ಮೃತ ದುರ್ದೈವಿ.
ಇವರು ಅರಣ್ಯದಲ್ಲಿ ತಗುಲಿದ ಬೆಂಕಿಯನ್ನು ನಂದಿಸುವ ಸಂದರ್ಭದಲ್ಲಿ ಕೆಳಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಭೇಟಿ ನೀಡಿ, ಅಂತಿಮ ಗೌರವ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಕುಟುಂಬಸ್ಥರೊoದಿಗೆ ಮಾತನಾಡಿದ ಅವರು, ಮೃತ ವಾಚಮನ್ ಜೂಜ್ ಸಿದ್ದಿ ಅವರ ಕುಟುಂಬದವರಿಗೆ ಸರ್ಕಾರದಿಂದ ಸಿಗಬಹುದಾದ ಎಲ್ಲ ಸೌಲಭ್ಯವನ್ನು ಕೂಡಲೇ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
- Advertisement -