Saturday, April 27, 2024
spot_imgspot_img
spot_imgspot_img

ಬೆಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು ಮೃತ್ಯು

- Advertisement -G L Acharya panikkar
- Advertisement -
vtv vitla

ಬೆಂಗಳೂರು: ಬೆಂಗಳೂರಿನ ಕುಣಿಗಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು‌ ನಿವಾಸಿ ಭಾಸ್ಕರ್‌ ಎಕ್ಕಾರು ಮೃತಪಟ್ಟಿದ್ದಾರೆ.

ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು(66) ಕುಣಿಗಲ್ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ.

ಕೆಲಸ ನಿಮಿತ್ತ ಕಳೆದ ೧೦ ದಿನಗಳ ಹಿಂದೆ ಮಹಾರಾಷ್ಟ್ರ ಮತ್ತು ಬೆಂಗಳೂರು ಮತ್ತಿರರ ಕಡೆಗಳಿಗೆ ತೆರಳಿದ್ದು, ಶನಿವಾರ ಬೆಂಗಳೂರಿನಿಂದ ಮಂಗಳೂರಿಗೆ ತಮ್ಮ ಇನ್ನೋವಾ ವಾಹನದಲ್ಲಿ ವಾಪಸ್ಸಾಗುವ ಸಂದರ್ಭ ಕುಣಿಗಲ್ ನಲ್ಲಿ ಭಾಸ್ಕರ್ ದಾಸ್ ಅವರು ಸಂಚರಿಸುತ್ತಿದ್ದ ವಾಹನಕ್ಕೆ ಎಮ್ಮೆಯೊಂದು ಅಡ್ದ ಬಂದ್ದಿದೆ.

ಅಪಘಾತ ತಪ್ಪಿಸಲು ಚಾಲಕ ಕೂಡಲೇ ಬ್ರೇಕ್ ಹಾಕಿದ್ದು, ಈ ಸಂದರ್ಭ ತಮ್ಮ ವಾಹನಕ್ಕೆ ಹಿಂಬದಿಯಿಂದ ಬಂದ ಮಿನಿ ಬಸ್ ಡಿಕ್ಕಿ ಹೊಡೆದಿದೆ. ಮುಂಭಾಗದ ಸೀಟ್ ನಲ್ಲಿ ವಿಶ್ರಾಂತಿಯಲ್ಲಿದ್ದ ಭಾಸ್ಕರ್ ದಾಸ್ ಗಂಭೀರ ಗಾಯಗೊಂಡಿದ್ದರು ಕೂಡಲೇ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದ್ದು ಭಾನುವಾರ ಸಂಜೆ ಅಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಭಾಸ್ಕರ್‌ದಾಸ್‌ ಅವರು ಪ್ರಸ್ತುತ ಭಾರತ ಸರಕಾರದ ಸಾಮಾಜಿಕ ನ್ಯಾಯ ಹಕ್ಕುಗಳ ಸಬಲೀಕರಣ ಸಚಿವಾಲಯ ಡಿಎನ್‌ಟಿ-ಎನ್‌ಟಿ-ಎಸ್ಎನ್‌ಟಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಡಿ. ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತರಾಗಿದ್ದರು.

ಮೃತರು ಪತ್ನಿ ಮತ್ತು ಮೂವರು ಗಂಡು ಮಕ್ಕಳು ಅಗಲಿದ್ದಾರೆ. ಮೃತ ಅಂತಿಮ ಸಂಸ್ಕಾರ ಸೋಮವಾರ ಎಕ್ಕಾರಿನಲ್ಲಿ ನಡೆಯಲಿದ್ದು ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

- Advertisement -

Related news

error: Content is protected !!