Thursday, April 18, 2024
spot_imgspot_img
spot_imgspot_img

ಬೆಂಗಳೂರು : ಕಾಲೇಜು ವಿದ್ಯಾರ್ಥಿನಿಯ ಕತ್ತು ಕೊಯ್ದು ಪರಾರಿ

- Advertisement -G L Acharya panikkar
- Advertisement -

ಬೆಂಗಳೂರು: ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಯುವತಿಯನ್ನು ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ರಾಜಾನುಕುಂಟೆ ಸಮೀಪದ ಶಾನುಭೋಗನಹಳ್ಳಿಯಲ್ಲಿ ನಡೆದಿದೆ.

ಶಾನುಭೋಗನಹಳ್ಳಿ ಗ್ರಾಮದ ರಾಶಿ(20) ಹತ್ಯೆಗೀಡಾದವರು. ಸಂಜೆ 5 ಗಂಟೆ ಸುಮಾರಿಗೆ ಕಾಲೇಜು ಮುಗಿಸಿ ಮನೆಗೆ ಹೊರಟಿದ್ದ ಯುವತಿ ದಿಣ್ಣೂರು ಗೇಟಿನಲ್ಲಿ ಬಸ್‌ನಿಂದ ಇಳಿದಿದ್ದು , ಅಲ್ಲಿಂದ ಶಾನುಭೋಗನಹಳ್ಳಿಗೆ ನಡೆದು ಹೋಗುವಾಗ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವತಿಯ ಕತ್ತುಸೀಳಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹತ್ಯೆಗೀಡಾದ ಯುವತಿ ಪ್ರಥಮ ಬಿ.ಎ ವ್ಯಾಸಂಗ ಮಾಡುತ್ತಿದ್ದರು. ಪ್ರೀತಿ ನಿರಾಕರಿಸಿದ ಹಿನ್ನೆಲೆ ಯುವತಿಯನ್ನು ಹತ್ಯೆ ಮಾಡಲಾಗಿದೆ.

ಸದ್ಯ ಈ ಪ್ರಕರಣದಲ್ಲಿ ಪೊಲೀಸರು ಆರೋಪಿ ಮಧುಚಂದ್ರನನ್ನು ಬಂಧಿಸಿದ್ದಾರೆ. ಅಲ್ಲದೇ ಆರೋಪಿ ಕೊಲೆ ಆಂಧ್ರ ಪ್ರದೇಶಕ್ಕೆ ಪರಾರಿಯಾಗಲು ಯತ್ನಿಸಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಮೂರು ವರ್ಷಗಳಿಂದ ಕಾಲೇಜು ರಜಾ ದಿನಗಳಲ್ಲಿ ಸೀಬೆ ಹಣ್ಣು ತೋಟದಲ್ಲಿ ಯುವತಿ ಕೆಲಸಕ್ಕೆ ಹೋಗುತ್ತಿದ್ದು ಈ ವೇಳೆ ಅಗಾಗ ತೋಟಕ್ಕೆ ಸೀಬೆ ಹಣ್ಣು ಬಾಕ್ಸ್ ಗಳನ್ನ ತೆಗೆದುಕೊಂಡು ಹೋಗಲು ಆರೋಪಿ, ಮಧುಚಂದ್ರ ಟೆಂಪೋ ತರುತ್ತಿದ್ದನು. ಈ ವೇಳೆ ಇಬ್ಬರಿಗೂ ಪರಿಚಯವಾಗಿದ್ದು ಆತ್ಮೀಯತೆ ಇತ್ತು ಎನ್ನಲಾಗಿದೆ.

ಆದರೆ ಆರೋಪಿ ಮಧುಚಂದ್ರನಿಗೆ ಈಗಾಗಲೇ ಒಂದು ಮದುವೆಯಾಗಿದ್ದು, ಒಂದು ಮಗು ಇದೆ. ಹೀಗಿದ್ದರೂ ಪ್ರೀತಿ ಮಾಡುವಂತೆ ಹಾಗೂ ತನ್ನ ಆಸೆಯಂತೆ ನಡೆದುಕೊಳ್ಳುವಂತೆ ಆರೋಪಿ ಒತ್ತಾಯ ಮಾಡುತ್ತಿದ್ದನಂತೆ , ಮದುವೆ ವಿಚಾರ ಹಾಗೂ ಆರೋಪಿ ವರ್ತನೆಯಿಂದ ಬೇಸತ್ತು ಯುವತಿ ಆತನಿಂದ ದೂರ ಇರಲು ಆರಂಭಿಸಿದ್ದಳು. ಇದೇ ಕಾರಣಕ್ಕೆ ಕೋಪಗೊಂಡಿದ್ದ ಆರೋಪಿ, ನಿನ್ನೆ ತೋಟದಲ್ಲಿ ಅಡ್ಡ ಹಾಕಿ ಯುವತಿಯ ಕತ್ತುಕೊಯ್ದು ಪರಾರಿಯಾಗಿದ್ದಾನೆ.

- Advertisement -

Related news

error: Content is protected !!