Saturday, April 20, 2024
spot_imgspot_img
spot_imgspot_img

ಬೆಂಗಳೂರು : ಹೈಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆಗೆ ರಾಜೇಶ್ ರೈ ಕಲ್ಲಂಗಳ ಆಯ್ಕೆ

- Advertisement -G L Acharya panikkar
- Advertisement -

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಹುದ್ದೆಗೆ ವಿಜಯಕುಮಾರ್ ಎ. ಪಾಟೀಲ್, ರಾಜೇಶ್ ರೈ ಕಲ್ಲಂಗಳ ಮತ್ತು ತಾಜಾಲಿ ಮೌಲಾಸಾಬ್ ನದಾಫ್ ಅವರನ್ನು ನೇಮಕ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ.

ವಿಜಯಕುಮಾರ್ ಎ. ಪಾಟೀಲ್ ಅವರು ಸದ್ಯ ಬೆಂಗಳೂರಿನ ಹೈಕೋರ್ಟ್‍ನಲ್ಲಿ ರಾಜ್ಯ ಸರಕಾರದ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ, ರಾಜೇಶ್ ರೈ ಕಲ್ಲಂಗಳ ಹಾಗೂ ತಾಜಾಲಿ ಮೌಲಾಸಾಬ್ ನಡಾಫ್ ಅವರು ಹಿರಿಯ ವಕೀಲರಾಗಿದ್ದಾರೆ. ಈಮೂವರು ವಕೀಲರನ್ನು ಹೈಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಕಮಾಡಲು ಕೊಲಿಜಿಯಂ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ.

ಶಿಫಾರಸುಗೊಂಡ ವಕೀಲರು ನ್ಯಾಯಮೂರ್ತಿಗಳ ಹುದ್ದೆಗೆ ನೇಮಕಗೊಂಡಲ್ಲಿ ಹೆಚ್ಚುವರಿ ನ್ಯಾಯಮೂರ್ತಿ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಎರಡು ವರ್ಷದ ನ್ಯಾಯಪೀಠದ ಕರ್ತವ್ಯ ನಿರ್ವಹಣೆಯ ಆಧಾರದಲ್ಲಿ ಅವರ ನ್ಯಾಯಮೂರ್ತಿ ಹುದ್ದೆಯನ್ನು ಖಾಯಂಗೊಳಿಸಲಾಗುತ್ತದೆ.

- Advertisement -

Related news

error: Content is protected !!