Thursday, May 9, 2024
spot_imgspot_img
spot_imgspot_img

ಬೆಳ್ತಂಗಡಿ:ಅಕ್ರಮ ಗೋ ಸಾಗಾಟ; ಬಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ; ಓರ್ವ ಆರೋಪಿ ಪೊಲೀಸ್ ವಶಕ್ಕೆ

- Advertisement -G L Acharya panikkar
- Advertisement -
vtv vitla
vtv vitla
vtv vitla

ಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ಮಿಂಚಿನ ದಾಳಿ ನಡೆಸಿ, ಓರ್ವ ಆರೋಪಿಯನ್ನು ಪೊಲೀಸರಿಗೊಪ್ಪಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕುರುಡ್ಯದಿಂದ ನಿನ್ನೆ ಮಧ್ಯ ರಾತ್ರಿ ಪಿಕಾಪ್ ವಾಹನ ಒಂದರಲ್ಲಿ ಅಕ್ರಮ ಗೋಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ಮಿಂಚಿನ ದಾಳಿ ನಡೆಸಿ, ಅಕ್ರಮ ಗೋ ಸಾಗಾಟವನ್ನು ತಡೆ ಹಿಡಿದಿದ್ದಾರೆ.

ಬಳಿಕ ಸ್ಥಳೀಯ ಪೋಲೀಸರ ಸಹಕಾರದಿಂದ ಒರ್ವ ಆರೋಪಿಯನ್ನು ಬಂಧಿಸಿದ್ದು, ಸಾಗಾಟ ಮಾಡುತ್ತಿದ್ದ ಪಿಕಾಪ್ ವಾಹನ, ಮಾರುತಿ 800 ವಾಹನ ಹಾಗೂ ಗೋವುಗಳನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಭಜರಂಗದಳದ ದಾಳಿ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸಿಕ್ಕಿ ಬಿದ್ದ ಆರೋಪಿಗಳು ಕಳೆದ ಕೆಲವು ದಿನಗಳಿಂದ ಅವ್ಯಾಹತವಾಗಿ ಅಕ್ರಮ ದನ ಸಾಗಾಟದಲ್ಲಿ ತೊಡಗಿದ್ದರು ಎನ್ನಲಾಗಿದೆ. ಆದರೆ ಇಂದು ರೆಡ್ ಹ್ಯಾಂಡ್ ಆಗಿ ಭಜರಂಗದಳದ ಕಾರ್ಯಕರ್ತರ ಕೈಗೆ ಸಿಕ್ಕಿ ಬಿದ್ದಿದ್ದು, ಸದ್ಯ ಓರ್ವನನ್ನು ಬೆಳ್ತಂಗಡಿ ಪೋಲೀಸರು ಬಂಧಿಸಿದ್ದು, ಪರಾರಿಯಾದವರಿಗಾಗಿ ಬಲೆ ಬೀಸಿದ್ದಾರೆ.

vtv vitla
- Advertisement -

Related news

error: Content is protected !!