- Advertisement -
- Advertisement -
ಬೆಳ್ತಂಗಡಿ: ಕಬಡ್ಡಿ ಪಂದ್ಯಾಟದ ವೇಳೆ ಅಂಪೈರ್ ತೀರ್ಪಿನಿಂದ ಅಸಮಾಧಾನಗೊಂಡ ಆಟಗಾರರು ಮೈದಾನದಲ್ಲೇ ಹೊಡೆದಾಡಿಕೊಂಡ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ನಡೆದಿದೆ ಎನ್ನಲಾಗಿದೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿಮಾನಿ ಬಳಗ ಮುಂಡಾಜೆ ವತಿಯಿಂದ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಅಂಪೈರ್ ಕೊಟ್ಟ ತೀರ್ಪಿನ ವಿರುದ್ಧ ಆಟಗಾರರು ರೊಚ್ಚಿಗೆದ್ದು ಪರಸ್ಪರ ಹೊಡೆದಾಟ ನಡೆಸಿರುವುದಲ್ಲದೆ ತೀರ್ಪುಗಾರರ ಮೇಲೆಯೂ ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದೆ.
ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮಂದಡ್ಕದ ಆಡೂರು ಮೈದಾನದಲ್ಲಿ ಫೆ.19 ರಂದು ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಆಟಗಾರರ ಮಧ್ಯೆ ನಡೆದ ಹೊಡೆದಾಟದಲ್ಲಿ ಸಂಘಟಕರೂ ಭಾಗಿಗಳಾಗಿರುವುದಾಗಿ ತಿಳಿದು ಬಂದಿದೆ. ಇದೀಗ ಹೊಡೆದಾಟದ ವಿಡಿಯೋ ವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಅಗ್ತಿದೆ.
- Advertisement -