Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ; 3 ದೋಣಿ, 2 ಟಿಪ್ಪರ್ ವಶಕ್ಕೆ!

- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಮುಂಡಾಜೆ ಗ್ರಾಮದ ಹೊಸಕಾಪು ಎಂಬಲ್ಲಿ ಖಾಸಗಿ ಜಾಗದಲ್ಲಿ ಹಾದುಹೋಗುವ ಮೃತ್ಯುಂಜಯ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಗೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬಂಟ್ವಾಳ ಎಎಸ್ ಪಿ ಮತ್ತು ತಂಡ ಬುಧವಾರ ಬೆಳಗ್ಗಿನ ಜಾವ ಮಫ್ತಿಯಲ್ಲಿ ದಾಳಿ ನಡೆಸಿದರು.

ಈ ವೇಳೆ ಮರಳುಗಾರಿಕೆಗೆ ಬಳಸುತ್ತಿದ್ದ ಎರಡು ದೋಣಿ ಹಾಗೂ ಎರಡು ಟಿಪ್ಪರ್ ವಾಹನವನ್ನು ವಶಪಡಿಸಿಕೊಂಡು ಧರ್ಮಸ್ಥಳ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ಮೇಲೆ ದಾಳಿಯಲ್ಲಿ ಒಂದು ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಕಡೆ ದಾಳಿ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!