- Advertisement -
- Advertisement -
ಬೆಳ್ತಂಗಡಿ: ಅಡಿಕೆ ಮರದಿಂದ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಪ್ರಗತಿಪರ ಕೃಷಿಕ ಶೇಖರ್ ಪೂಜಾರಿ (52) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಿಧನ ಹೊಂದಿದ್ದಾರೆ
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಿಂಜಾಲು ಮನೆಯ ಶೇಖರ್ ಪೂಜಾರಿ (52) ಮೃತರು. ಪ್ರಗತಿಪರ ಕೃಷಿಕರಾಗಿದ್ದ ಶೇಖರ್ ಪೂಜಾರಿಯವರು ಡಿ.11 ರಂದು ತಮ್ಮ ತೋಟದಲ್ಲಿ ಅಡಿಕೆ ಮರದಿಂದ ಅಡಿಕೆ ತೆಗೆಯುವ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದರು. ಅವರ ತಲೆಗೆ ಹಾಗೂ ಕುತ್ತಿಗೆಗೆ ಗಂಭೀರ ಸ್ವರೂಪದ ಗಾಯವಾಗಿತ್ತು. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಡಿ.26 ರ ಮಧ್ಯರಾತ್ರಿ ನಿಧನರಾಗಿದ್ದಾರೆ.
- Advertisement -