- Advertisement -
- Advertisement -
ಬೆಳ್ತಂಗಡಿ : ಗ್ರಾಮದ ನಿರ್ದಿಂ ನಿವಾಸಿ ಅಬ್ದುಲ್ ಮುತ್ತಲಿಬ್ ಮತ್ತು ಝುಬೈದಾ ದಂಪತಿ ಪುತ್ರ ಮುಹಮ್ಮದ್ ಹನೀಫ್ (22) ಎಂಬವರು ಫೆ.15 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬೆಳ್ತಂಗಡಿಯ ಚಿನ್ನದ ಮಳಿಗೆಯಲ್ಲಿ ಮಾರ್ಕೆಟಿಂಗ್ ಫೀಲ್ಡ್ ವಿಭಾಗದಲ್ಲಿ ಕೆಲಸದಲ್ಲಿದ್ದ ಮೃತರು ಕೆಲದಿನಗಳಿಂದ ಅನಾರೋಗ್ಯ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆದುಕೊಂಡಿದ್ದರು.
ನಂತರ ಅವರಿಗೆ ರೋಗ ಉಲ್ಬಣಿಸಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಅಲ್ಲಿ ಕೊನೆಯುಸಿರೆಳೆದಿದ್ದಾರೆ.
ಮುಹಮ್ಮದ್ ಹನೀಫ್ ಅವರು ಎಸ್ಎಸ್ಎಫ್ ಸಂಘಟನೆಯ ಸಕ್ರೀಯ ಕಾರ್ಯಕರ್ತರಾಗಿದ್ದರು. ಮೃತರು ತಂದೆ, ತಾಯಿ, ಸಹೋದರಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
- Advertisement -