Saturday, May 18, 2024
spot_imgspot_img
spot_imgspot_img

ಬೆಳ್ತಂಗಡಿ: ಅಬಕಾರಿ ದಳದ ಕಾರ್ಯಾಚರಣೆ; ಗಾಂಜಾ ಸಹಿತ ಇಬ್ಬರ ಬಂಧನ..!

- Advertisement -G L Acharya panikkar
- Advertisement -

ಬೆಳ್ತಂಗಡಿ: ಅಬಕಾರಿ ಇಲಾಖೆ ಬೆಳ್ತಂಗಡಿ ತಾಲೂಕಿನಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಗಾಂಜಾ ಪ್ರಕರಣ ಭೇದಿಸಿದ್ದು ಇಬ್ಬರನ್ನು ಬಂಧಿಸಿದ್ದು ಗಾಂಜಾ ಮತ್ತು ವಾಹನಗಳನ್ನು ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಡೆದಿದೆ.

ಮಾನ್ಯ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೆಜ್ ಮಂಗಳೂರು ಇವರ ಮಾರ್ಗದರ್ಶನದಲ್ಲಿ ದಿನಾಂಕ ಜೂನ್ 3 ರಂದು ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ 41.530ಗ್ರಾಂ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ತೌಸಿಕ್ ಮತ್ತು ರಫೀಕ್ ಎಂಬುವವರನ್ನು ಬಂಧಿಸಿ ವಾಹನ ಹಾಗೂ ಗಾಂಜಾ ವನ್ನು ವಶಪಡಿಸಿಕೊಂಡು ಪ್ರಕರಣವನ್ನು ಅಬಕಾರಿ ಉಪ ನಿರೀಕ್ಷಕರು ಬೆಳ್ತಂಗಡಿ ವಲಯ ಇವರು ದಾಖಲಿಸಿರುತ್ತಾರೆ ಆರೋಪಿಗಳಿಗೆ ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ. ತಕ್ಷೀರು ಸಮಯದಲ್ಲಿ ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು ಹಾಗೂ ಬೆಳ್ತಂಗಡಿ ಅಬಕಾರಿ ವಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹಕರಿಸಿದ್ದಾರೆ.

ಇಬ್ಬರು ಆರೋಪಿಗಳ ಮೇಲೆ ಮೂರು ಗಾಂಜಾ ಪ್ರಕರಣ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿರುತ್ತದೆ.

- Advertisement -

Related news

error: Content is protected !!