Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಅರಣ್ಯಪ್ರದೇಶದಲ್ಲಿ ರಿಂಗಣಿಸಿದ ಸ್ಯಾಟಲೈಟ್ ಫೋನ್‌ ಕರೆ..!? ಸ್ಯಾಟ್ ಲೈಟ್ ಕರೆ ಹೋಗಿರುವುದು ದೃಢಪಟ್ಟಿಲ್ಲ: ಎಸ್ ಪಿ ರಿಷಿಕೇಶ್ ಸೋನಾವಣೆ

- Advertisement -
- Advertisement -

ಬೆಳ್ತಂಗಡಿ: ಮಂಗಳೂರಿನ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆದ ಹಿಂದಿನ ದಿನ ಬೆಳ್ತಂಗಡಿಯ ಬೆಂದ್ರಾಳದಲ್ಲಿ ಸ್ಯಾಟಲೈಟ್‌ ಫೋನ್‌ ಕರೆ ಹೋಗಿರುವುದು ಗುಪ್ತಚರ ಮೂಲಗಳು ತಿಳಿಸಿದೆ. ಕರಾವಳಿಯ ದಟ್ಟಾರಣ್ಯ ಪ್ರದೇಶದಲ್ಲಿ ನಿಗೂಢ ಚಟುವಟಿಕೆಗಳು ನಡೆದಿರುವ ಬಗ್ಗೆ ಗುಪ್ತಚರ ಮೂಲಗಳು ದೃಢಪಡಿಸಿದ ಬೆನ್ನಲೇ ಧರ್ಮಸ್ಥಳ ಪೊಲೀಸರು ಬೆಂದ್ರಾಳ ಅರಣ್ಯದಲ್ಲಿ ಶೋಧ ನಡೆಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕಿರಿಯಿಸಿರುವ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿರುವುದು ದೃಢಪಟ್ಟಿಲ್ಲ ಎಂದು ತಿಳಿಸಿದ್ದಾರೆ

ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಅನಿಲ್ ಕುಮಾರ್ ಡಿ ಮತ್ತು ತಂಡ ತೋಟತ್ತಾಡಿ ಗ್ರಾಮದ ಬಾರೆಮನೆ ನಿವಾಸಿಗಳಾದ ರುಕ್ಮಯ ಗೌಡ ಮನೆ ಮತ್ತು ಚೆಲುವಮ್ಮ ಎಂಬುವವರ ಮನೆಯಲ್ಲಿ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ. ಬೆಂದ್ರಾಳ ಸುತ್ತಮುತ್ತಲಿನ ಸುಮಾರು 5 ಕಿ.ಮೀ ಅರಣ್ಯ ಪ್ರದೇಶದೊಳಗೆ ಹುಡುಕಾಟ ನಡೆಸಿ ನಂತರ ಸ್ಯಾಟಲೈಟ್‌ ಕರೆ ಹೋದ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಬೆಂದ್ರಾಳ ಪ್ರದೇಶದ ಅರಣ್ಯದಲ್ಲಿ ಸ್ಫೋಟದ ಶಬ್ದ ಕೇಳಿಸಿದೆ ಎಂಬ ವದಂತಿ ಹರಡುತ್ತಿದೆ. ಈ ಬಗ್ಗೆಯೂ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಪ್ರದೇಶದಲ್ಲಿ ಕಾಡಾನೆಗಳ ಉಪಟಳ ಅತ್ಯಂತ ಹೆಚ್ಚಾಗಿದೆ. ಅವುಗಳನ್ನು ಓಡಿಸಲು ಸ್ಥಳೀಯರು ಪಟಾಕಿಗಳನ್ನು ಉಪಯೋಗಿಸುತ್ತಿದ್ದಾರೆ. ಅದರ ಶಬ್ದವೇ ಆಗಿರಬಹುದು ಎಂಬ ಮಾಹಿತಿ ಪರಿಶೀಲನೆಯ ಸಂದರ್ಭದಲ್ಲಿ ಕಂಡುಬಂದಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

- Advertisement -

Related news

error: Content is protected !!