ಬೆಳ್ತಂಗಡಿ: ಉಡುಪಿ ವಲಯದ ಅರಣ್ಯ ಸಂಚಾರಿ ದಳದ ಮಹಿಳಾ ಅಧಿಕಾರಿಯೊಬ್ಬರನ್ನು ಬೀದರ್ಗೆ ವರ್ಗಾವಣೆ ಮಾಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಇದೀಗ ಮಹಿಳಾ ಅಧಿಕಾರಿಯನ್ನು ಪ್ರಸ್ತುತ ಇರುವ ಸ್ಥಳದಲ್ಲೇ ಕರ್ತವ್ಯದಲ್ಲಿ ಮುಂದುವರೆಯುವಂತೆ ಹಿರಿಯ ಅರಣ್ಯಾ ಅಧಿಕಾರಿಗಳು ಮೌಖಿಕವಾಗಿ ತಿಳಿಸಿದ್ದು, ಸರ್ಕಾರದಿಂದ ಅಧಿಕೃತವಾದ ಯಾವುದೇ ಆದೇಶ ಬಂದಿಲ್ಲ ಎಂದು ತಿಳಿದು ಬಂದಿದೆ.
ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ಸಚಿನ್ ಅವರನ್ನು ಬೀದರ್ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದ್ದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಕೆಲವು ಸಂಘಟನೆಗಳೂ ಕೂಡ ಆಕ್ರೋಶ ವ್ಯಕ್ತಪಡಿಸಿದ್ದವು.
ಇನ್ನು ಬೆಳ್ತಂಗಡಿಯ ಅಕ್ರಮ ಮರ ಸಾಗಾಟಗಾರರ ಮರಮಟ್ಟು, ವಾಹನ ವಶಪಡಿಸಿಕೊಂಡ ಕಾರಣ ಶಾಸಕರು ಕೋಪಗೊಂಡು ನನ್ನಲ್ಲಿ ವೈಯಕ್ತಿಕ ದ್ವೇಷ ಹಗೆತನ ಸಾಧಿಸಿದ್ದಾರೆ ಎಂದು ಸಂಧ್ಯಾ ಸಚಿನ್ ಆರೋಪಿಸಿದ್ದರು.
ಇದನ್ನೂ ಓದಿ: ಬೆಳ್ತಂಗಡಿ: ಶಾಸಕರ ವೈಯುಕ್ತಿಕ ದ್ವೇಷಕ್ಕೆ ಮಹಿಳಾ ಅರಣ್ಯಾಧಿಕಾರಿ ಎತ್ತಂಗಡಿ.!