Tuesday, April 23, 2024
spot_imgspot_img
spot_imgspot_img

ಬೆಳ್ತಂಗಡಿ: ಆಟೋ ಚಾಲಕ ಆತ್ಮಹತ್ಯೆ ಪ್ರಕರಣ; ಕೆರೆಯಲ್ಲಿ ಶವ ಪತ್ತೆ

- Advertisement -G L Acharya panikkar
- Advertisement -
vtv vitla

ಬೆಳ್ತಂಗಡಿ: ಕೆರೆಗೆ ಹಾರಿ ಆಟೋ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು, ಕೆರೆಯಲ್ಲಿ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಇದೀಗ ಆಟೋ ಚಾಲಕನ ಶವ ಪತ್ತೆಯಾಗಿದೆ.

ಕೊಂಟುಪಳಿಕೆ ಶಿವಾಜಿನಗರ ನಿವಾಸಿ ಆಟೋ ಚಾಲಕ ಪ್ರವೀಣ್‌ ಪಿಂಟೋ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಪ್ರವೀಣ್ ಕೆಲವು ದಾಖಲೆಗಳು ಕೆರೆ ಬಳಿ ಪತ್ತೆಯಾಗಿದ್ದು, ಇದರಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಅಗ್ನಿಶಾಮಕ ದಳ, ಬೆಳಾಲು ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ. ಶವವನ್ನು ಬೆಳ್ತಂಗಡಿ ಸರಕಾರಿ ಶವಗಾರಕ್ಕೆ ಸಾಗಿಸಲಾಗಿದೆ.

ನಿನ್ನೆ ರಾತ್ರಿ ಗುರುವಾಯನಕೆರೆಯಲ್ಲಿ ಸ್ನೇಹಿತನ ಮೆಹಂದಿ ಕಾರ್ಯಕ್ರಮ ಇದ್ದು ಇಲ್ಲಿ ಗಲಾಟೆ ನಡೆದಿದ್ದು, ನಂತರ ಗೆಳೆಯರು ಸಮಾಧಾನ ಮಾಡಿ ಮನೆಗೆ ಕರೆದುಕೊಂಡು ಬಿಟ್ಟಿದ್ದರು. ಈ ನಡುವೆ ವ್ಯಕ್ತಿಯೊಬ್ಬರಿಗೆ ಬೆಳಗ್ಗೆ ನಾಲ್ಕು ಗಂಟೆಗೆ ಕರೆ ಮಾಡಿ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಗಲಾಟೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರವೀಣ್ ಪತ್ನಿ ಹಾಗೂ ನಾಲ್ಕು ವರ್ಷದ ಮಗುವನ್ನು ಅಗಲಿದ್ದು, ಪತ್ನಿಏಳು ತಿಂಗಳ ಗರ್ಭಿಣಿ ಕೂಡ ಆಗಿದ್ದಾರೆ.

ಆತ್ಮಹತ್ಯೆ ಬಗ್ಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!