Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ಆನ್ ಲೈನ್ ಯುಗದಲ್ಲಿ ವಿದ್ಯಾರ್ಥಿಗಳು ಪೋಷಕರು ಹಾಗೂ ಶಿಕ್ಷಕರ ಪಾತ್ರ ವಿಚಾರ ಸಂಕಿರಣ

- Advertisement -
- Advertisement -

ಬೆಳ್ತಂಗಡಿ: ಕರ್ನಾಟಕ ಪತ್ರಕರ್ತರ ಸಂಘ ಬೆಳ್ತಂಗಡಿ ಘಟಕ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ “ಆನ್ ಲೈನ್ ಯುಗದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ಪಾತ್ರ” ವಿಚಾರ ದಲ್ಲಿ ಕಾರ್ಯಾಗಾರವು ಬುಧವಾರ ಕಾಲೇಜು ಪ್ರಾಂಗಣದಲ್ಲಿ ನಡೆಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಂಗಳೂರು ಪಾಂಡೇಶ್ವರ ಮಹಿಳಾ ಪೋಲೀಸ್ ಠಾಣಾ ವೃತ್ತ ನಿರೀಕ್ಷಕರಾದ ರೇವತಿ ಅವರು ಮಾಹಿತಿ ನೀಡಿದರು.

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜ್ ಪ್ರಾಂಶುಪಾಲ ಸುಕುಮಾರ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ಉದ್ಘಾಟಿಸಿದರು. ಪತ್ರಕರ್ತ ಲತೀಫ್ ನೇರಳಕಟ್ಟೆ ಉಪಸ್ಥಿತರಿದ್ದರು.

ಇದೇ ವೇಳೆ ಪಾಂಡೇಶ್ವರ ಮಹಿಳಾ ಪೋಲೀಸ್ ಠಾಣಾ ವೃತ್ತ ನಿರೀಕ್ಷಕರಾದ ರೇವತಿ ಅವರನ್ನು ಅಭಿನಂದಿಸಲಾಯಿತು. ಕರ್ನಾಟಕ ಪತ್ರಕರ್ತರ ಸಂಘ, ಬೆಳ್ತಂಗಡಿ ಘಟಕದ ಅಧ್ಯಕ್ಷ ವೆಂಕಟೇಶ ಬೆಂಡೆ ಸ್ವಾಗತಿಸಿ, ವಂದಿಸಿದರು.

ಪತ್ರಕರ್ತ ದತ್ತಾತ್ರೇಯ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.



 

 

- Advertisement -

Related news

error: Content is protected !!