- Advertisement -
- Advertisement -
ಬೆಳ್ತಂಗಡಿ: ಕೊಕ್ಕಡ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದ “ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರ” ವನ್ನು ಇಂದು ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾಧಕಾರಿ ಡಾ.ರಾಜೇಂದ್ರ ಕೆ ವಿ. ಮಂಡಲ ಬಿಜೆಪಿ ಅಧ್ಯಕ್ಷ ಶ್ರೀ ಜಯಂತ್ ಕೋಟ್ಯಾನ್ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಕೊಕ್ಕಡದಲ್ಲಿರುವ ಎಂಡೋ ಪಾಲನಾ ಕೇಂದ್ರಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಬೇಟಿ ನೀಡಿ ಎಂಡೋ ಸಂತ್ರಸ್ತರನ್ನು ಮಾತನಾಡಿಸಿದರು, ಎಂಡೋ ಸಂತ್ರಸ್ತರ ನೆರವಿಗೆ ಬೇಕಾಗುವ ಎಲ್ಲಾ ಸಹಕಾರವನ್ನು ಮಾಡುವ ಭರವಸೆ ನೀಡಿದರು.
- Advertisement -