- Advertisement -
- Advertisement -


ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ಪತ್ನಿಯೇ ಪತಿಯನ್ನು ಹತ್ಯೆಗೈದಿರುವ ಘಟನೆ ಮಂಗಳವಾರ (ಜು.5) ನಡೆದಿದೆ.
ನಾವೂರು ಗ್ರಾಮದ ಅರಣ್ಯ ಪ್ರವಾಸಿ ಮಂದಿರ ಬಳಿಯ ಅಬ್ಬನ್ ಕೆರೆ ಬಳಿ ದಂಪತಿಗಳು ವಾಸವಿದ್ದರು. ಬೇಬಿ(60) ಕೊಲೆಯಾದ ದುರ್ದೈವಿ. ಪತ್ನಿ ನೆಲ್ಲಮ್ಮ(55) ಆರೋಪಿ. ಕೊಲೆಯಾದ ಬಳಿಕ ಪತಿ ಬಳಿ ಪತ್ನಿ ಕತ್ತಿ ಹಿಡಿದು ಕುಳಿತಿದ್ದರು.

ಕೃಷಿಕ ದಂಪತಿಯಾಗಿರುವ ಇವರಿಗೆ ಮೂವರು ಮಕ್ಕಳಿದ್ದು, ಪುತ್ರಿಗೆ ವಿವಾಹವಾಗಿದ್ದು, ಓರ್ವ ಪುತ್ರ ವಿದೇಶದಲ್ಲಿ, ಮತ್ತೋರ್ವ ಪುತ್ರ ಬೇರೆಡೆ ವಾಸವಾಗಿದ್ದಾರೆ. ಮನೆಯಲ್ಲಿ ಇಬ್ಬರೇ ಇದ್ದರು ಎಂದು ತಿಳಿದುಬಂದಿದೆ.
ಪತ್ನಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಯಾವುದೋ ಕಾರಣಕ್ಕೆ ಪತಿಯನ್ನು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಮಂಗಳೂರು: ಆರ್ ಟಿ ಒ ಕಚೇರಿಯ ಮೂವರು ಅಧಿಕಾರಿಗಳು ಅಮಾನತು
- ವೃದ್ಧಾಶ್ರಮದಲ್ಲಿ ಬಂಧಿಯಾಗಿದ್ದ 39 ವೃದ್ಧರ ರಕ್ಷಣೆ..!
- ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯತ್ವ ಪಡೆದು ಅಧ್ಯಕ್ಷ ಸ್ಥಾನ ಅಲಂಕರಿಸಿದ ಹರೀಶ್ ಇಂಜಾಡಿಯವರ ಭವಿಷ್ಯ ನಿರ್ಧಾರ..! ಜುಲೈ 3 ರಂದು ಹೈಕೋರ್ಟ್ನಲ್ಲಿ ತೀರ್ಪು …?
- ಧರ್ಮಸ್ಥಳ, ಸೌತಡ್ಕ ಕ್ಷೇತ್ರಕ್ಕೆ ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿ ಮುಖೇಶ್ ರಾಜ್ ಪುರೋಹಿತ್ ಭೇಟಿ
- ಮಂಗಳೂರು: ಮಕ್ಕಳ ಕಳ್ಳ ಸಾಗಾಟ ಪ್ರಕರಣ; ಮೂವರು ಆರೋಪಿಗಳಿಗೆ ಶಿಕ್ಷೆ ಘೋಷಣೆ


- Advertisement -