- Advertisement -
- Advertisement -


ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ಪತ್ನಿಯೇ ಪತಿಯನ್ನು ಹತ್ಯೆಗೈದಿರುವ ಘಟನೆ ಮಂಗಳವಾರ (ಜು.5) ನಡೆದಿದೆ.
ನಾವೂರು ಗ್ರಾಮದ ಅರಣ್ಯ ಪ್ರವಾಸಿ ಮಂದಿರ ಬಳಿಯ ಅಬ್ಬನ್ ಕೆರೆ ಬಳಿ ದಂಪತಿಗಳು ವಾಸವಿದ್ದರು. ಬೇಬಿ(60) ಕೊಲೆಯಾದ ದುರ್ದೈವಿ. ಪತ್ನಿ ನೆಲ್ಲಮ್ಮ(55) ಆರೋಪಿ. ಕೊಲೆಯಾದ ಬಳಿಕ ಪತಿ ಬಳಿ ಪತ್ನಿ ಕತ್ತಿ ಹಿಡಿದು ಕುಳಿತಿದ್ದರು.

ಕೃಷಿಕ ದಂಪತಿಯಾಗಿರುವ ಇವರಿಗೆ ಮೂವರು ಮಕ್ಕಳಿದ್ದು, ಪುತ್ರಿಗೆ ವಿವಾಹವಾಗಿದ್ದು, ಓರ್ವ ಪುತ್ರ ವಿದೇಶದಲ್ಲಿ, ಮತ್ತೋರ್ವ ಪುತ್ರ ಬೇರೆಡೆ ವಾಸವಾಗಿದ್ದಾರೆ. ಮನೆಯಲ್ಲಿ ಇಬ್ಬರೇ ಇದ್ದರು ಎಂದು ತಿಳಿದುಬಂದಿದೆ.
ಪತ್ನಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಯಾವುದೋ ಕಾರಣಕ್ಕೆ ಪತಿಯನ್ನು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಜೂ.22 ರವರೆಗೆ ದೇಶದಲ್ಲಿ ಟೆಲಿಗ್ರಾಂ ನಿಷೇಧ – ನೀಟ್ ಮರು ಪರೀಕ್ಷೆಗೂ ಮುನ್ನ ಕೇಂದ್ರ ಆದೇಶ
- ಮೆಡಿಕಲ್ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ
- ನಟ ವಿಜಯ್ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ
- ಮಂಗಳೂರು: ಸೋಮೇಶ್ವರದಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
- ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ


- Advertisement -








