- Advertisement -
- Advertisement -
ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ಪತ್ನಿಯೇ ಪತಿಯನ್ನು ಹತ್ಯೆಗೈದಿರುವ ಘಟನೆ ಮಂಗಳವಾರ (ಜು.5) ನಡೆದಿದೆ.
ನಾವೂರು ಗ್ರಾಮದ ಅರಣ್ಯ ಪ್ರವಾಸಿ ಮಂದಿರ ಬಳಿಯ ಅಬ್ಬನ್ ಕೆರೆ ಬಳಿ ದಂಪತಿಗಳು ವಾಸವಿದ್ದರು. ಬೇಬಿ(60) ಕೊಲೆಯಾದ ದುರ್ದೈವಿ. ಪತ್ನಿ ನೆಲ್ಲಮ್ಮ(55) ಆರೋಪಿ. ಕೊಲೆಯಾದ ಬಳಿಕ ಪತಿ ಬಳಿ ಪತ್ನಿ ಕತ್ತಿ ಹಿಡಿದು ಕುಳಿತಿದ್ದರು.
ಕೃಷಿಕ ದಂಪತಿಯಾಗಿರುವ ಇವರಿಗೆ ಮೂವರು ಮಕ್ಕಳಿದ್ದು, ಪುತ್ರಿಗೆ ವಿವಾಹವಾಗಿದ್ದು, ಓರ್ವ ಪುತ್ರ ವಿದೇಶದಲ್ಲಿ, ಮತ್ತೋರ್ವ ಪುತ್ರ ಬೇರೆಡೆ ವಾಸವಾಗಿದ್ದಾರೆ. ಮನೆಯಲ್ಲಿ ಇಬ್ಬರೇ ಇದ್ದರು ಎಂದು ತಿಳಿದುಬಂದಿದೆ.
ಪತ್ನಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಯಾವುದೋ ಕಾರಣಕ್ಕೆ ಪತಿಯನ್ನು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು; ಅಪಾಯದಿಂದ ಪಾರು..!
- ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
- ಕೋವ್ಯಾಕ್ಸಿನ್ ಪಡೆದ ಅನೇಕರಲ್ಲಿ ಸೈಡ್ ಎಫೆಕ್ಟ್: ಬನಾರಸ್ ಹಿಂದೂ ವಿವಿ
- ಗುಂಡೇಟಿನಿಂದ ಯುವಕ ಸಾವು..!
- ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ 2024-25ರ ಶೈಕ್ಷಣಿಕ ವರ್ಷದ ಪದವಿ ತರಗತಿಗಳ ಪ್ರವೇಶಾತಿ ಪ್ರಾರಂಭ
- Advertisement -