Friday, April 26, 2024
spot_imgspot_img
spot_imgspot_img

ಬೆಳ್ತಂಗಡಿ: ಕಾಲು ಜಾರಿ ಬಾವಿಗೆ ಬಿದ್ದು ಪ್ರಾಣ ಕಳೆದುಕೊಂಡ ಯುವತಿ!

- Advertisement -G L Acharya panikkar
- Advertisement -

ಬೆಳ್ತಂಗಡಿ: ಯುವತಿಯೋರ್ವಳು ಕಾಲು ಜಾರಿಗೆ ಬಾವಿಗೆ ಬಿದ್ದಿರುವ ಘಟನೆ ತಾಲೂಕಿನ ವೇಣೂರಿನ ಗೋಳಿಯಂಗಡಿಯ ಎಸ್.ಡಿ.ಎಮ್.ಐಟಿಐ ಕಾಲೇಜಿನ ಬಳಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಐಷಾತುಲಾ ಅನಿಷಾ(18) ಎನ್ನಲಾಗಿದೆ.

ಬಟ್ಟೆ ಒಗೆದು ಬಾವಿಯ ಕಟ್ಟೆಯ ಮೇಲೆ ಒಣಗಿಸಲು ಹೋದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯುವತಿಗೆ ಕಣ್ಣಿನ ಸಮಸ್ಯೆ ಇತ್ತು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ಹಾಗೂ ಬೆಳ್ತಂಗಡಿ ಅಗ್ನಿಶಾಮಕ ದಳ ಭೇಟಿ ನೀಡಿ ಮೃತದೇಹವನ್ನು ಮೇಲಕೆತ್ತಿದ್ದಾರೆ. ಈ ಘಟನೆಯ ಸಂಬಂಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

driving
- Advertisement -

Related news

error: Content is protected !!