Friday, May 10, 2024
spot_imgspot_img
spot_imgspot_img

ಬೆಳ್ತಂಗಡಿ: ಕಾಲೇಜಿಗೆಂದು ಹೊರಟ ವಿದ್ಯಾರ್ಥಿನಿ ನಾಪತ್ತೆ..!!

- Advertisement -G L Acharya panikkar
- Advertisement -
vtv vitla
vtv vitla
vtv vitla

ಬೆಳ್ತಂಗಡಿ: ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿನಿಯೋರ್ವಳು ಕಾಲೇಜಿಗೆಂದು ಹೊರಟು ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಾಪತ್ತೆಯಾದ ಯುವತಿ ಮೂಡಿಗೆರೆ ನಿವಾಸಿ ಕಿಟ್ಟ ಎನ್ ರವರ ಪುತ್ರಿ ಸಿಂಧು(17) ಎಂದು ತಿಳಿದುಬಂದಿದೆ. ಈಕೆ ಬೆಳ್ತಂಗಡಿಯ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿಯ ವಿದ್ಯಾರ್ಥಿನಿಯಾಗಿದ್ದಳು.

ಘಟನೆಯ ವಿವರ:

ನ. 17 ರಂದು ಬೆಳ್ತಂಗಡಿ ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯಕ್ಕೆ ಸೇರ್ಪಡೆಗೊಂಡಿದ್ದರು. ಬೆಳಿಗ್ಗೆ ಎಂದಿನಂತೆ ಹಾಸ್ಟೆಲಿನ ಇತರ ವಿದ್ಯಾರ್ಥಿಗಳ ಜೊತೆಗೆ ಕಾಲೇಜಿಗೆಂದು ತೆರಳಿದ್ದರು.

ಆದರೆ ಸಂಜೆ 5. 00 ಗಂಟೆಯವರೆಗೂ ಈಕೆ ಮರಳಿ ಬಾರದೇ ಇದ್ದು, ಅತ್ತ ಕಾಲೇಜಿಗೂ ಹೋಗದೆ ಇತ್ತ ಹಾಸ್ಟೆಲ್ ಗಾಗಲೀ, ಹೆತ್ತವರ ಮನೆಗೂ ಹೋಗದೆ ನಾಪತ್ತೆಯಾಗಿರುತ್ತಾರೆ ಎಂಬುವುದಾಗಿ ಹಾಸ್ಟೆಲ್ ವಾರ್ಡನ್ ಶುಭಾ ನಾಯಕ್ ರವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ.

vtv vitla
vtv vitla
- Advertisement -

Related news

error: Content is protected !!