Tuesday, April 30, 2024
spot_imgspot_img
spot_imgspot_img

ಬೆಳ್ತಂಗಡಿ: ಚಿತ್ರದುರ್ಗದ ಬಾಲಕ ಬೆಳ್ತಂಗಡಿ ವಸತಿಗೃಹದ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣು

- Advertisement -G L Acharya panikkar
- Advertisement -

ಬಾಲಕನೊಬ್ಬ ವಸತಿಗೃಹದ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಪಕ್ಕದಲ್ಲಿರುವ ಸರಕಾರಿ ವಸತಿಗೃಹದಲ್ಲಿ ನಡೆದಿದೆ.

ಚಿತ್ರದುರ್ಗದಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ, ಶಿವಪ್ರಸಾದ್ (15) ಎಂಬಾತ ವಸತಿಗೃಹದ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಕ.

ಬೆಳ್ತಂಗಡಿ ಶಿಕ್ಷಣ ಇಲಾಖೆಯ ಸರಕಾರಿ ವಸತಿಗೃಹದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿರುವ ಮಂಜಳಾ ಅವರ ತಂಗಿ ಭಾಗ್ಯಮ್ಮ ಅವರ ಮಗ ಶಿವಪ್ರಸಾದ್ ಶಾಲೆಗೆ ರಜೆ ಇರುವುದರಿಂದ ದೊಡ್ಡಮ್ಮ ಮಂಜುಳಾ ಅವರ ಬೆಳ್ತಂಗಡಿಯ ವಸತಿಗೃಹಕ್ಕೆ ಬಂದಿದ್ದು, ಮನೆಯಲ್ಲಿ ಎಲ್ಲರೂ ಕೆಲಸಕ್ಕೆ ಹೋಗಿದ ಸಂದರ್ಭದಲ್ಲಿ ಈ ಘಟನೆ ನಡೆದದ್ದು, ಮಂಜುಳಾ ಕೆಲಸದಿಂದ ವಸತಿಗೃಹಕ್ಕೆ ಬಂದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಗಿದ್ದು,ಬೆಳ್ತಂಗಡಿ ಸಬ್ ಇನ್ಸೆಕ್ಟರ್ ಅರ್ಜುನ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!