- Advertisement -
- Advertisement -
ಬೆಳ್ತಂಗಡಿ: ಬೆಂಗಳೂರಿನಿಂದ ಅಬ್ಬಿ ಜಲಪಾತ ವೀಕ್ಷಣೆಗಾಗಿ ಬಂದಿದ್ದ ಕುಟುಂಬವೊಂದರ ಐದು ವರ್ಷದ ಮಗುವೊಂದು ಬಿದ್ದು ಮುಖ ಮತ್ತು ತಲೆಗೆ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಶ್ರೇಯಾ ಎಂಬ ಬಾಲಕಿ ಗಾಯಗೊಂಡವರು. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಬೆಳ್ತಂಗಡಿ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.
ಚಾರಣಿಗರು ಮೂಡಿಗೆರೆ ತಾಲೂಕು ಬಾಳೂರು ಬಳ್ಳಾಲರಾಯನದುರ್ಗ ಕಡೆಯಿಂದ 17 ಮಂದಿ ಇದ್ದ ಕುಟುಂಬವೊಂದು ಜಲಪಾತ ವೀಕ್ಷಣೆಗೆ ಬಂದಿದ್ದರು. ಈ ವೇಳೆ ಬಳಗದಲ್ಲಿದ್ದ ಐದು ವರ್ಷದ ಮಗು ಶ್ರೇಯಾ ಪಾಚಿಗಟ್ಟಿದ ಕಲ್ಲಿನ ಮೇಲೊಂದರಿಂದ ಅಲ್ಪ ಆಳಕ್ಕೆ ಜಾರಿ ಬಿದ್ದರು. ಈ ವೇಳೆ ಅವರ ಮುಖ, ತಲೆಗೆ ಹೆಚ್ಚಿನ ಗಾಯವಾದರೆ ಮೈ ಮೇಲೆ ತರಚಿದ ಗಾಯಗಳಾಗಿವೆ.
- Advertisement -