- Advertisement -
- Advertisement -
ಬೆಳ್ತಂಗಡಿ: ಜಾಗದ ವಿಚಾರದಲ್ಲಿ ತಕರಾರು ನಡೆದು ಕೆಯ್ಯೂರು ಗ್ರಾಮದ ವ್ಯಕ್ತಿಯೋರ್ವರಿಗೆ ಮರದ ದೊಣ್ಣೆಯಿಂದ ಹೊಡೆದು ಹಲ್ಲೆ ನಡೆಸಿದ ಘಟನೆ ನಡೆದಿದೆ. ಕೆಯ್ಯೂರು ಗ್ರಾಮದ ಬೀಜದಡಿ ನಿವಾಸಿ ವೆಂಕಪ್ಪ ಗೌಡ (40) ಎಂಬವರಿಗೆ ಬೀಜದಡಿ ನಿವಾಸಿ ಪುಮೋದ್ ಎಂಬಾತ ಮರದ ದೊಣ್ಣೆಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ ಎಂದು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಜಮೀನಿನ ವಿಚಾರದಲ್ಲಿ ತಕರಾರು ನಡೆದಿತ್ತು. ಪ್ರಮೋದ್ ಎಂಬವರು ತಮ್ಮ ಮನೆಗೆ ಅಕ್ರಮವಾಗಿ ಪುವೇಶಿಸಿ ಮರದ ದೊಣ್ಣೆಯಿಂದ ಹೊಡೆದಿದ್ದಾರೆ ಎಂದು ವೆಂಕಪ್ಪ ಗೌಡ ದೂರಿನಲ್ಲಿ ಆರೋಪಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡ ವೆಂಕಪ್ಪ ಗೌಡರನ್ನು ಸ್ಥಳೀಯರು ಬೆಳ್ತಂಗಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
- Advertisement -