Saturday, April 27, 2024
spot_imgspot_img
spot_imgspot_img

ಬೆಳ್ತಂಗಡಿ: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ; ಓರ್ವನ ಬಂಧನ

- Advertisement -G L Acharya panikkar
- Advertisement -

ಬೆಳ್ತಂಗಡಿ: ತಾಲೂಕು ಕಳಿಯ ಗ್ರಾಮದ ಪರಪ್ಪು ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಗುರುವಾಯನಕೆರೆಗೆ ದ್ವಿಚಕ್ರ ವಾಹನದಲ್ಲಿ ವೇಗವಾಗಿ ಸವಾರಿ ಮಾಡಿಕೊಂಡು ಬರುತ್ತಿರುವುದನ್ನು ನೋಡಿ ಪೊಲೀಸರು ನಿಲ್ಲಿಸಲು ಸೂಚಿಸಿದ್ದಾರೆ. ತಪಾಸಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಯನ್ನು ಇಳಂತಿಲ ಗ್ರಾಮದ ನೇಜಿಕಾರು ಅಂಬೊಟ್ಟು ಮನೆ ನಿವಾಸಿ ಮಹಮ್ಮದ್ ಶಾಫಿ ಯಾನೆ ನೇಜಿಕಾರ್ ಶಾಫಿ (29) ಎಂದು ಗುರುತಿಸಲಾಗಿದೆ.

ಆರೋಪಿ ತಾನು ಬೆನ್ನಿನಲ್ಲಿ ಏನೋ ವಸ್ತುವನ್ನು ತುಂಬಿಸಿದ್ದ ಬ್ಯಾಗ್ ಒಂದನ್ನು ಹಾಕಿಕೊಂಡಿದ್ದು, ಕೂಡಲೇ ಅದನ್ನು ಅಲ್ಲಿಂದಲೇ ತೆರೆದು ನೋಡಿದಾಗ, ಅದರಲ್ಲಿ ಖಾಕಿ ಬಣ್ಣದ ಗಮ್ ಟೇಪ್ ನಿಂದ ಕವರ್ ಮಾಡಿ ಗಾಂಜಾ ಸಾಗಾಟ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯಿಂದ 71,925 ಮೌಲ್ಯದ 2 ಕೆಜಿ 55 ಗ್ರಾಂ ಗಾಂಜಾ ಹಾಗೂ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕಾರ್ಯಚರಣೆಯಲ್ಲಿ ಬೆಳ್ತಂಗಡಿ ಠಾಣಾ ಪೊಲೀಸ್ ಉಪ ನಿರೀಕ್ಷಕ ನಂದ ಕುಮಾರ್ ಮತ್ತು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರ ಅಪರಾಧ ಪತ್ತೆ ತಂಡದ ಸಿಬ್ಬಂದಿಯವರಾದ ಅಬ್ದುಲ್ ಲತೀಫ್, ಇಬ್ರಾಹಿಂ ಗರ್ಡಾಡಿ, ಬೆಳ್ತಂಗಡಿ ಠಾಣಾ ಸಿಬ್ಬಂದಿ ಮಾಲತೇಶ್ ರಾವ್, ಗುತ್ಯಪ್ಪ, ಚರಣ್ ಮೊದಲಾದವರು ಭಾಗಿಯಾಗಿದ್ದರು.

- Advertisement -

Related news

error: Content is protected !!