ಬೆಳ್ತಂಗಡಿ: ಇತ್ತೀಚೆಗೆ ಬೆಳ್ತಂಗಡಿಯಲ್ಲಿ ಗೀತಾ ಜಯಂತಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃಮಂಡಳಿ ದುರ್ಗಾ ವಾಹಿನಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ನಡೆದ ಶೌರ್ಯ ಪಥ ಸಂಚಲನದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವ ವಾಗ್ಮಿ ಬೆಂಗಳೂರಿನ ಹಾರಿಕಾ ಮಂಜುನಾಥ್ ರವರು ಮುಸ್ಲಿಂ ಸಮುದಾಯದದ ವಿರುದ್ಧ ಪ್ರಚೋದನಕಾರಿ ಭಾಷಣವನ್ನು ಮಾಡಿದ್ದಾರೆ ಎಂದು ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಶಬ್ಬೀರ್ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹಾರಿಕಾ ಮಂಜುನಾಥ್ ರವರು ದಿಕ್ಕೂಚಿ ಭಾಷಣ ಮಾಡುತ್ತಾ ಮುಸ್ಲಿಮರು ಮಸೀದಿಯಲ್ಲಿ ಐದು ಹೊತ್ತಿನ ನಮಾಜ್ ಗೆ ಆಹ್ವಾನ ಕೊಡುವ ಅಜಾನ್ನಲ್ಲಿ ಕಾಫಿರ್ (ಮುಸ್ಲಿಮೇತರರನ್ನು) ಕೊಲ್ಲಲು ಕರೆ ಕೊಡುತ್ತಿದ್ದಾರೆ’ ಎಂದು ಹೇಳಿ ಮುಸ್ಲಿಂ ಸಮುದಾಯಕ್ಕೆ ಅವಹೇಳನ ಮಾಡಿದ್ದಾರೆ.
ಜೊತೆಗೆ ಹಿಂದೂ ಭಾಂದವರನ್ನು ಮುಸ್ಲಿಂ ಸಮುದಾಯದ ವಿರುದ್ಧ ಉದ್ರೇಕಿಸಲು ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬುವುದಾಗಿ ಆರೋಪಿಸಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.