- Advertisement -
- Advertisement -
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಪಾರ್ನಡ್ಕ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ, ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ವೇಳೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಯ ಕುರಿತು ಬಜರಂಗದಳ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿಯ ಬೆನ್ನು ಹತ್ತಿದ ಪೊಲೀಸರು ಈ ದಾಳಿ ನಡೆಸಿದ್ದಾರೆ.
ಇನ್ನು ದಾಳಿ ವೇಳೆ ಮೂವರು ಆರೋಪಿಗಳು ಪರಾರಿಯಾಗಿದ್ದು, ಸುಮಾರು 45 ಕೆ.ಜಿ ದನದ ಮಾಂಸ ಹಾಗೂ ಸ್ಥಳದಲ್ಲಿದ್ದ ದ್ವಿ ಚಕ್ರ ವಾಹನವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳಾದ ತಾಜುದ್ದೀನ್, ಇಸಾಕ್ ರಜಾಕ್ ಬಂಧನಕ್ಕೆ ಬೆಳ್ತಂಗಡಿ ಠಾಣೆಯ ಪೊಲೀಸರು ಬಲೆ ಬೀಸಿದ್ದಾರೆ.
- Advertisement -