
ಬೆಳ್ತಂಗಡಿ: ನಿಯಂತ್ರಣ ಕಳೆದುಕೊಂಡ ಬೈಕ್ ಮನೆಯ ಗೇಟಿನ ಬಳಿ ಇದ್ದ ಕಲ್ಲಿನ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಘಟನೆ ಉಜಿರೆಯ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಪಕ್ಕದ ತಿರುವಿನ ರಸ್ತೆಯಲ್ಲಿ ನಡೆದಿದೆ. ಬೈಕ್ ಸ್ಕಿಡ್ ಆಗಿ ಸವಾರ ಮೃತಪಟ್ಟಿರುವ ಘಟನೆ ನ.23 ರಂದು ರಾತ್ರಿ ವೇಳೆ ನಡೆದಿದೆ. ನೆರಿಯ ಗ್ರಾಮದ ಪಾದೆಗುಡ್ಡೆ ನಿವಾಸಿ ನೋಣಯ್ಯ ಗೌಡರ ಪುತ್ರ ಪ್ರದೀಪ್ (22) ದುರ್ದೈವಿ.
ಪ್ರದೀಪ್ ಸಂಬಂಧಿಗಳ ಮನೆಯಲ್ಲಿ ಇರುವ ಶುಭ ಕಾರ್ಯದ ನಿಮಿತ್ತ ವಸ್ತುವೊಂದನ್ನು ನೀಡಲು ಹೋಗುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತವಾದ ರಸ್ತೆಯು ಅಪಾಯಕಾರಿ ವಲಯವಾಗಿದ್ದು , ಈ ಹಿಂದೆ ಕೂಡ ಇಲ್ಲಿ ಹಲವಾರು ಭಾರಿ ಅಪಘಾತ ಮತ್ತು ಪ್ರಾಣಹಾನಿ ಸಂಭವಿಸಿದೆ.

ಪ್ರದೀಪ್ ಅವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಎಡ ಭಾಗದಲ್ಲಿರುವ ಮನೆಯ ಗೇಟಿನ ಬಳಿ ಇದ್ದ ಕಲ್ಲಿನ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಲ್ಲಿದ್ದ ಸ್ಥಳೀಯರು ತಕ್ಷಣ ಪ್ರದೀಪ್ ಅವರನ್ನು ಉಜಿರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಮಂಗಳೂರಿಗೆ ಸಾಗಿಸುವ ಮಧ್ಯ ದಾರಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
- ಮಂಗಳೂರು: ಆರ್ ಟಿ ಒ ಕಚೇರಿಯ ಮೂವರು ಅಧಿಕಾರಿಗಳು ಅಮಾನತು
- ವೃದ್ಧಾಶ್ರಮದಲ್ಲಿ ಬಂಧಿಯಾಗಿದ್ದ 39 ವೃದ್ಧರ ರಕ್ಷಣೆ..!
- ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯತ್ವ ಪಡೆದು ಅಧ್ಯಕ್ಷ ಸ್ಥಾನ ಅಲಂಕರಿಸಿದ ಹರೀಶ್ ಇಂಜಾಡಿಯವರ ಭವಿಷ್ಯ ನಿರ್ಧಾರ..! ಜುಲೈ 3 ರಂದು ಹೈಕೋರ್ಟ್ನಲ್ಲಿ ತೀರ್ಪು …?
- ಧರ್ಮಸ್ಥಳ, ಸೌತಡ್ಕ ಕ್ಷೇತ್ರಕ್ಕೆ ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿ ಮುಖೇಶ್ ರಾಜ್ ಪುರೋಹಿತ್ ಭೇಟಿ
- ಮಂಗಳೂರು: ಮಕ್ಕಳ ಕಳ್ಳ ಸಾಗಾಟ ಪ್ರಕರಣ; ಮೂವರು ಆರೋಪಿಗಳಿಗೆ ಶಿಕ್ಷೆ ಘೋಷಣೆ

