- Advertisement -
- Advertisement -
ಬೆಳ್ತಂಗಡಿ: ಮೂಡಿಗೆರೆಯ ಆಲ್ಲೂರು ಸಮೀಪ ವಸ್ತಾರೆ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ಮಗುಚಿ ಬಿದ್ದ ವೇಳೆ ಟ್ರ್ಯಾಕ್ಟರ್ ಮೈಮೇಲೆ ಹರಿದು ಬೈಕ್ ಸವಾರ ಚಾರ್ಮಾಡಿ ಬೀಟಿಗೆ ನಿವಾಸಿ ಸುಲೈಮಾನ್ (35) ಎಂಬವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಘಟನೆಯಲ್ಲಿ ಬೈಕ್ ಸಹಸವಾರ ಅಶ್ರಫ್ ಅವರಿಗೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಮೃತಪಟ್ಟಿರುವ ಸುಲೈಮಾನ್ ಅವರು ಬೀಟಿಗೆಯ ಮೂಸಕುಂಞ ಮತ್ತು ಬೀಫಾತಿಮಾ ದಂಪತಿಯ ಪುತ್ರರಾಗಿದ್ದಾರೆ. ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದು, ಚಿಕ್ಕಮಗಳೂರಿನ ಸಹೋದರಿಯ ಮನೆಗೆ ಕೆಲಸದ ನಿಮಿತ್ತ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
- Advertisement -