Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪ; ದೂರು ದಾಖಲು

- Advertisement -
- Advertisement -

ಬೆಳ್ತಂಗಡಿ: ಕಡಬ ಆಲಂಕಾರು ಗ್ರಾಮದ ವ್ಯಕ್ತಿಯೊಬ್ಬರಿಗೆ ತಂಡವೊಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ಉಜಿರೆಯಲ್ಲಿ ನಡೆದಿದೆ.

ಹಲ್ಲೆಗೊಳಗಾದವರನ್ನು ಕಡಬ ತಾಲೂಕಿನ ನೆಕ್ಕರೆ ನಿವಾಸಿ ಬಾಬು ಯಾನೆ ರುದ್ರ (53) ಎಂದು ಗುರುತಿಸಲಾಗಿದೆ.

ಇವರು ಆಲಂಕಾರಿನಿಂದ ಬೆಳ್ತಂಗಡಿ ಕಡೆಗೆ ಹೋಗಲೆಂದು ಉಪ್ಪಿನಂಗಡಿಯಿಂದ ಧರ್ಮಸ್ಥಳಕ್ಕೆ ತೆರಳಿ, ಬಸ್ಸಿನಿಂದ ಇಳಿದು ಪಜಿರಡ್ಕ ಕಡೆಗೆ ಹೋಗುವ ರಸ್ತೆಯಲ್ಲಿ ರಾತ್ರಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಆರೋಪಿಗಳಾದ ಶಂಕರ ಮತ್ತು ಮಕ್ಕಳಾದ ಸದಾಶಿವ ಹಾಗೂ ಶಶಿ ಎಂಬವರು ತಡೆದು ಅವ್ಯಾಚ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ ಅಲ್ಲದೆ, ಎಡ ಕೈಗೆ ಗಾಯಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!