Saturday, May 18, 2024
spot_imgspot_img
spot_imgspot_img

ಬೆಳ್ತಂಗಡಿ: ವ್ಯಕ್ತಿಯ ಮೇಲೆ ಎರಗಿದ ಕಡವೆ; ಆಸ್ಪತ್ರೆಗೆ ದಾಖಲು

- Advertisement -G L Acharya panikkar
- Advertisement -

ಬೆಳ್ತಂಗಡಿ: ಕಡವೆ ದಾಳಿಗೊಳಗಾಗಿ ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲಾದ ಘಟನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಪರಂಟ್ಯಾಲ ಎಂಬಲ್ಲಿ ನಡೆದಿದೆ.

ಪರಂಟ್ಯಾಲ ನಿವಾಸಿ ನಾರಾಯಣ ಪೂಜಾರಿಯವರು ಕಡವೆ ದಾಳಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ.

ಸುಲ್ಕೇರಿಮೊಗ್ರುವಿನಲ್ಲಿ ಪ್ರಗತಿಪರ ಕೃಷಿಕರಾಗಿರುವ ನಾರಾಯಣ ಪೂಜಾರಿಯವರು ಸಮೀಪದ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುವಾಗ ನಿನ್ನೆ ಮಧ್ಯಾಹ್ನ ವೇಳೆ ಮುಗೇರ್ ಎಂಬಲ್ಲಿ ಕಡವೆ ಇವರ ಮೇಲೆ ಜಿಗಿದು ದಾಳಿ ಮಾಡಿದೆ.

ಕಡವೆ ಜಿಗಿದ ಪರಿಣಾಮ ರಸ್ತೆಗೆ ಬಿದ್ದ ಇವರಿಗೆ ಎದೆ, ಪಕ್ಕೆಲುಬುವಿಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ. ಕೂಡಲೇ ಸ್ಥಳಿಯರ ಸಹಕಾರದಿಂದ ಗಾಯಾಳುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಯವರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!