- Advertisement -
- Advertisement -
ಬೆಳ್ತಂಗಡಿ: ಬಿಹಾರ ಮೂಲದ ಕೂಲಿ ಕಾರ್ಮಿಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಡಿ.1ರಂದು ಇಲ್ಲಿನ ಬಂಗಾಡಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ಬಿಹಾರ ಮೂಲದ ಚಂದನ್(35) ಎನ್ನಲಾಗಿದೆ.
ಚಂದನ್ ಹಲವು ವರ್ಷಗಳ ಹಿಂದೆ ಬಂಗಾಡಿಯಲ್ಲಿ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದು ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಆದರೆ ಸುಮಾರು 10 ತಿಂಗಳ ಹಿಂದೆ ಪತ್ನಿ ಮತ್ತು ಮಕ್ಕಳನ್ನು ತನ್ನೂರಿನಲ್ಲಿ ಬಿಟ್ಟು, ಬಂಗಾಡಿಗೆ ಮರಳಿ ಬಂದಿದ್ದು, ಕಾಂಟ್ರಾಕ್ಟ್ ದಾರರೊಂದಿಗೆ ಸೆಂಟ್ರಿಂಗ್ ಕೆಲಸವನ್ನು ನಿರ್ವಹಿಸುತ್ತಿದ್ದರು. ಡಿ.1 ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -