Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ಹೃದಯಾಘಾತದಿಂದ ಮೃತಪಟ್ಟ ಪಿಯುಸಿ ವಿದ್ಯಾರ್ಥಿ

- Advertisement -
- Advertisement -

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಆ. 9ರಂದು ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್‌ಹೌಸ್‌ ಬಳಿ ನಡೆದಿದೆ.

ಮೃತರನ್ನು ಪಿಲಿಕಳ ಪಂಪ್‌ಹೌಸ್‌ ಬಳಿಯ ನಿವಾಸಿ ಸಚಿನ್‌ (17) ಎಂದು ಗುರುತಿಸಲಾಗಿದೆ. ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.

ಆ. 9ರಂದು ಕಾಲೇಜಿಗೆ ರಜೆ ಇದ್ದು, ಮನೆಯಲ್ಲಿದ್ದ ಸಂದರ್ಭ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು. ಅವಳಿ ಮಕ್ಕಳ ಪೈಕಿ ಓರ್ವರಾಗಿರುವ ಅವರು ತಂದೆ, ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.

- Advertisement -

Related news

error: Content is protected !!