- Advertisement -
- Advertisement -
ಇತ್ತೀಚಿನ ದಿನಗಳಲ್ಲಿ ಅಕ್ರಮ ದಂಧೆ, ವ್ಯವಹಾರಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಯುವಕರಂತೂ ಇತಂಹ ಕಾರ್ಯಚಟುವಟಿಕೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ತಾ ಇದ್ದಾರೆ. ಬೆಳ್ತಂಗಡಿ ತಾಲೂಕಿನ ಇಲಂತಿಲದಲ್ಲಿ ಕೆಲವು ವರ್ಷಗಳಿಂದ ಮರಳು ದಂಧೆ ನಡೆಯುತ್ತಿದ್ದು ಆದರೆ ಇತ್ತೀಚಿನ ದಿನಗಳಲ್ಲಿ ಇದು ಮಾರಕವಾಗಿ ಕಾಡುತ್ತಿದೆ.
ಕಳೆದ ಆರು ತಿಂಗಳ ಹಿಂದೆ ಬೆಳ್ತಂಗಡಿ ಶಾಸಕ ಹರೀಶ್ಪೂಂಜಾ ನೇತೃತ್ವದಲ್ಲಿ ಸರಕಾರದ ಎರಡು ಕೋಟಿ ಅನುದಾನದಿಂದ ಸುಸಜ್ಜಿತ ರಸ್ತೆ ನಿರ್ಮಾಣ ಆಗಿತ್ತು. ಆದರೆ ಇದೀಗ ಈ ಮರುಳು ದಂದೆಯಿ0ದಾಗಿ ಹೆಚ್ಚುಭಾರವಿರುವ ವಾಹನಗಳ ಓಡಾಟದಿಂದ ರಸ್ತೆ ಹದಗೆಟ್ಟಿದ್ದು, ವಾಹನ ಸವಾರರು ಸೇರಿದಂತೆ ಶಾಲಾ ಮಕ್ಕಳು ಜೀವಭಯದಿಂದ ರಸ್ತೆಯಲ್ಲಿ ಓಡಾಡುವಂತಾಗಿದೆ. ಈ ಬಗ್ಗೆ ಗಾಮಸ್ಥರು ಮರಳು ಮಾಫಿಯಾದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಸಂಬ0ಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಂಡು ಮರಳು ದಂದೆಯನ್ನು ತಡೆಗಟ್ಟಬೇಕೆಂದು ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ನಡೆಸುವುದೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement -