Monday, May 6, 2024
spot_imgspot_img
spot_imgspot_img

ಬೆಳ್ತಂಗಡಿ: ಹೊಟೇಲ್‌ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಕಾರ್ಮಿಕ ಆತ್ಮಹತ್ಯೆ

- Advertisement -G L Acharya panikkar
- Advertisement -

ಬೆಳ್ತಂಗಡಿ : ಹೊಟೇಲ್ ಕಾರ್ಮಿಕನೋರ್ವ ಹೊಟೇಲಿನ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ನಗರದ ಸಂತೆಕಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಬೆಳ್ತಂಗಡಿಯ ಜ್ಯೂನಿಯರ್ ಕಾಲೇಜು ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ಎಂಬ ಹೆಸರಿನ ಹೊಟೇಲಿನಲ್ಲಿ ಅಡುಗೆ ಕೆಲಸಕ್ಕಿದ್ದ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ನಿವಾಸಿ ಜನಾರ್ದನ್ ಶೆಟ್ಟಿಗಾರ್ (48ವ) ಎಂದು ಗುರುತಿಸಲಾಗಿದೆ.

ಇವರು ಹೊಟೇಲ್ ನ ರೂಂನಲ್ಲಿ ವಾಸವಿದ್ದು, ಎರಡು ವಾರಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದು, ಜ.22ರಂದು ಭಾನುವಾರವಾಗಿದ್ದ ಕಾರಣ ಹೊಟೇಲ್ ಗೆ ರಜೆ ಇದ್ದು ಸಂಜೆ ವೇಳೆ ಮಾಲೀಕರು ಜನಾರ್ಧನ್ ಶೆಟ್ಟಿಗಾರ್ ಅವರಿಗೆ ಕರೆ ಮಾಡಿ ಸೋಮವಾರಕ್ಕೆ ಬೇಕಾಗುವ ಅಡುಗೆ ಸಾಮಾನು ತಂದಿಡಲು ಹೇಳಿದ್ದರು ಅದರಂತೆ ಸಾಮಾನು ತಂದು ನಂತರ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ತನಿಖೆಯ ಬಳಿಕವಷ್ಟೇ ಜನಾರ್ಧನ್‌ರವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿಯಬೇಕಾಗಿದೆ.

- Advertisement -

Related news

error: Content is protected !!