- Advertisement -
- Advertisement -
ಬೆಂಗಳೂರು: ಈಗಾಗಲೇ ರಾಜ್ಯಾಧ್ಯಂತ ಸಮರವನ್ನು ಸಾರಿ, ಬೆಳ್ಳಂಬೆಳಿಗ್ಗೆ ಭ್ರಷ್ಟರ ಬೇಟೆಯಾಡಿ, ಬಿಸಿ ಮುಟ್ಟಿಸಿದ್ದಂತ ಎಸಿಬಿ ಅಧಿಕಾರಿಗಳು, ಇಂದು ಬೆಂಗಳೂರಿನ 9 ಅಧಿಕಾರಿಗಳು ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಹಾಗಾದ್ರೇ ಯಾರ ಮೇಲೆಲ್ಲಾ ದಾಳಿ ನಡೆಸಲಾಗಿದೆ.
ಇಂದು ಎಸಿಬಿ ಬೆಂಗಳೂರು ನಗರವು 9 ವಿವಿಧ ಸ್ಥಳಗಳಲ್ಲಿ 9 ಮಧ್ಯವರ್ತಿಗಳು/ಏಜೆಂಟರು/ ಭ್ರಷ್ಟ/ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ/ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ ಅವ್ಯವಹಾರಗಳು ಮತ್ತು ಇತರ ಅಕ್ರಮಗಳಲ್ಲಿ ತೊಡಗಿರುವ ಶಂಕಿತರಿಗೆ ಸಂಬಂಧಿಸಿದಂತೆ 9 ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ.
ಎಸ್ಪಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ಸುಮಾರು 100 ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೋಧನೆಯಲ್ಲಿ ತೊಡಗಿದ್ದಾರೆ.
- Advertisement -