- Advertisement -
- Advertisement -
ಬೆಳ್ಳಾರೆ: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಇಬ್ಬರು ಆರೋಪಿಗಳನ್ನು ಸುಳ್ಯ ಪೋಲಿಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರನ್ನು ಇರ್ಪಾನ್ ಮತ್ತು ಅಲ್ತಾಫ್ ಎನ್ನಲಾಗಿದೆ.
ಬೆಂಗಳೂರಿನ ಕೆ.ಜಿ. ಹಳ್ಳಿಯಲ್ಲಿ ಅಡಗಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಮಧ್ಯರಾತ್ರಿ ಆಪರೇಷನ್ ನಡೆಸಿ ವಶಕ್ಕೆ ಪಡೆದ ತಂಡ, ಮಂಗಳೂರಿಗೆ ಕರೆತಂದಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿಗೆ ತೆರಳಿದ್ದ ಸ್ಪೆಷಲ್ ಟೀಂ ಕಾರ್ಯಾಚರಣೆ ನಡೆಸಿದ್ದರು. ಶಂಕಿತರು ಇದ್ದ ಮನೆ ಸುತ್ತುವರೆದು ರಾತ್ರಿ ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನೂ ಮಂಗಳೂರಿಗೆ ಕರೆ ತರಲಾಗಿದೆ.
HRBR ಲೇಔಟ್ನ ಮನೆಯೊಂದರಲ್ಲಿ, ಇಬ್ಬರು ಶಂಕಿತರು ಅಡಗಿದ್ದರು ಎನ್ನಲಾಗಿದ್ದು, ಪ್ರವೀಣ್ ಹತ್ಯೆಯಲ್ಲಿ ಇವರ ಕೈವಾಡ ಇದೆಯಾ ಅನ್ನೋದು ಪೊಲೀಸ್ ವಿಚಾರಣೆಯಲ್ಲಿ ತಿಳಿದುಬರಬೇಕಾಗಿದೆ.
- Advertisement -