Wednesday, May 22, 2024
spot_imgspot_img
spot_imgspot_img

ಬೇರೊಬ್ಬಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಪ್ರಿಯಕರ; ಕುದಿಯುವ ಎಣ್ಣೆ ಸುರಿದ ಯುವತಿ

- Advertisement -G L Acharya panikkar
- Advertisement -
vtv vitla

ಚೆನ್ನೈ: ಪ್ರೀತಿಸಿ ವಂಚಿಸಿದ ಪ್ರಿಯಕರನ ಮೇಲೆ ಕುದಿಯುವ ಎಣ್ಣೆ ಸುರಿದ ಘಟನೆ ತಮಿಳುನಾಡಿನ ಈರೋಡ್‍ನಲ್ಲಿ ನಡೆದಿದೆ.

ಕಾರ್ತಿ (27) ಯುವತಿಯಿಂದ ಹಲ್ಲೆಗೊಳಗಾಗದ ಯುವಕ , ಮೀನಾ ದೇವಿ ಬಂಧಿತೆ. ಈತ ಭವಾನಿಯ ವರ್ಣಪುರಂ ನಿವಾಸಿಯಾಗಿದ್ದು, ಪೆರುಂದುರೈನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ಈತ ತನ್ನ ಸಂಬಂಧಿ ಮೀನಾ ದೇವಿಯೊಂದಿಗೆ ಸಂಬಂಧ ಹೊಂದಿದ್ದ. ಇಬ್ಬರು ಮದುವೆಯಾಗುವ ನಿರ್ಧಾರವನ್ನು ಮಾಡಿದ್ದರು.

ಆದರೆ ಕಾರ್ತಿ ಬೇರೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಷಯವನ್ನು ಮೀನಾದೇವಿ ತಿಳಿದಿದೆ. ಈ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇದರಿಂದ ಕೋಪಗೊಂಡ ಮೀನಾ ದೇವಿ ಆತನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದಾಳೆ.

ಇದರಿಂದಾಗಿ ಕೈ ಮತ್ತು ಮುಖ ಉರಿಯಲಾರಂಭಿಸಿದ್ದರಿಂದ ಕಾರ್ತಿ ನೆಲಕ್ಕೆ ಬಿದ್ದಿದ್ದಾನೆ. ಸಹಾಯಕ್ಕಾಗಿ ಆತನ ಕೂಗು ಕೇಳಿದ ನೆರೆಹೊರೆಯವರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾಳೆ.

ಈ ಘಟನೆಗೆ ಸಂಬಂಧಿಸಿ ಮೀನಾದೇವಿಯನ್ನು ಬಂಧಿಸಲಾಗಿದೆ. ಈ ಘಟನೆ ಕುರಿತಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್​​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

Related news

error: Content is protected !!