- Advertisement -
- Advertisement -
ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ 75ರ ಬಿಲ್ಲಿನಕೋಟೆ ಬಳಿ ನಡೆದ ಅಪಘಾತದಲ್ಲಿ ಜೊಮ್ಯಾಟೋ ಡೆಲಿವರಿ ಬಾಯ್ ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಬಿಲ್ಲಿನಕೋಟೆಯಲ್ಲಿ ಬೈಕ್ಗೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದು ಬೈಕ್ ಸವಾರ ಮಲ್ಲೇಶ್ ಬಿ (24) ಮೃತಪಟ್ಟಿದ್ದಾರೆ.
ಬುಧವಾರ ಸಂಜೆ ಈ ಅಪಘಾತ ನಡೆದಿದ್ದು, ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಮಲ್ಲೇಶ್ ಅವರನ್ನು ಮೊದಲು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಅಲ್ಲಿಂದ ನೆಲಮಂಗಲ ಖಾಸಗಿ ಆಸ್ಪತ್ರೆ, ವಿಕ್ಟೋರಿಯಾ, ನಿಮ್ಹಾನ್ಸ್ ಮಾತ್ರವಲ್ಲ, ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಕೊನೆಗೆ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಕೊನೆಯುಸಿರೆಳೆದರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -