Thursday, April 25, 2024
spot_imgspot_img
spot_imgspot_img

ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆ

- Advertisement -G L Acharya panikkar
- Advertisement -

ಮೈಸೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮೈಸೂರಿನ ಮೆಲ್ಲಹಳ್ಳಿಯಲ್ಲಿ ನಡೆದಿದೆ.

24 ವರ್ಷದ ಮನೋಜ್ ಮೃತ ಯುವಕ. ಮೆಲ್ಲಹಳ್ಳಿಯವರೇ ಆದ ರಘು, ಸಚಿನ್, ಶಂಕರ್ ಎಂಬುವವರು ಯುವಕನನ್ನು ಹತ್ಯೆಗೈದಿದ್ದಾರೆ ಎನ್ನಲಾಗಿದೆ. ಯುವಕರ ನಡುವೆ ಆಗಾಗ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆಯುತ್ತಲೇ ಇತ್ತು. ಇದೇ ವಿಚಾರಕ್ಕೆ ಈಗ ಯುವಕ ಮನೋಜ್ ನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಮನೋಜ್ ನನ್ನು ಕೊಲೆ ಮಾಡಿರುವ ಆರೋಪಿಗಳು ಪರಾರಿಯಾಗಿದ್ದಾರೆ.

ವರುಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

- Advertisement -

Related news

error: Content is protected !!