Thursday, May 2, 2024
spot_imgspot_img
spot_imgspot_img

ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಎಎಸ್‌ಐ ಶಬೀರ್ ಹುಸೇನ್ ಮೃತ್ಯು

- Advertisement -G L Acharya panikkar
- Advertisement -

ದಾವಣಗೆರೆ: ಜಗಳೂರು ಬಳಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎಎಸ್‌ಐ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಜಗಳೂರು ಪಟ್ಟಣದ ಹೊರವಲಯದ ಚಿನ್ನು ಡಾಬಾ ಬಳಿ ಅಪಘಾತ ಸಂಭವಿಸಿದ್ದು, ವಿಜಯನಗರ ಜಿಲ್ಲೆ ಹಂಪಿ ನಿವಾಸಿ ಶಬೀರ್ ಹುಸೇನ್ (59) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅವರು ಮಗಳ ಮನೆಗೆ ಹೊರಟಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಎಎಸ್‌ಐ ಶಬೀರ್ ಹುಸೇನ್ ಅವರು ಕೊಟ್ಟೂರು ತರಳುಬಾಳು ಹುಣ್ಣಿಮೆ ಮೆರವಣಿಗೆ ವೇಳೆ ಕಾಳಾಪುರದಲ್ಲಿ ನಡೆದಿದ್ದ ಗಲಾಟೆ ಸಂಬಂಧ ತನಿಖೆಗೆ ಆಗಮಿಸಿದ್ದರು. ಈ ಗಲಾಟೆ ವಿಚಾರವಾಗಿ ಮಾಹಿತಿ ಕಲೆ ಹಾಕಲು ಬಂದಿದ್ದರು. ವಿಚಾರಣೆ ಮುಗಿಸಿದ ಬಳಿಕ ಚಿತ್ರದುರ್ಗದಲ್ಲಿನ ಮಗಳ ಮನೆಗೆ ಹೊರಟಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಬೈಕ್ ಡಿಕ್ಕಿಯಾದ ರಭಸಕ್ಕೆ ತಲೆಗೆ ಗಂಭೀರವಾಗಿ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೊಂದು ಬೈಕಿನಲ್ಲಿದ್ದ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಬ್ಬೀರ್ ಹುಸೇನ್ ಅವರು ಹೊಸಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜಗಳೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣವನ್ನು ದಾಖಲು ಮಾಡಲಾಗಿದೆ.

- Advertisement -

Related news

error: Content is protected !!