Saturday, May 4, 2024
spot_imgspot_img
spot_imgspot_img

ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಯುವಕ ಸಾವು

- Advertisement -G L Acharya panikkar
- Advertisement -

ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಯುವಕ ಸಾವನ್ನಪ್ಪಿದರೆ, ಇತ್ತ ಯುವತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಕೆರೆ ಏರಿ ಬಳಿ ನಡೆದಿದೆ. ಮರಿಯಮ್ಮ ಹಳ್ಳಿಯ ನಿವಾಸಿ, ರವಿಕುಮಾರ್ (28) ಮೃತ ಯುವಕ ಎಂದು ಗುರುತಿಸಲಾಗಿದೆ. ಆದರೆ, ಯುವತಿಯ ಗುರುತು ಇನ್ನೂ ಪತ್ತೆಯಾಗಲಿಲ್ಲ.

ಇವರು ಹೊಸಪೇಟೆಯಿಂದ ಕಮಲಾಪುರಕ್ಕೆ ಹೋಗುವ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದ್ದು, ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಗ್ರಾಮಸ್ಥರ ಸಹಾಯದಿಂದ ಯುವಕನ ಮೃತದೇಹವನ್ನು ಹೊರ ತೆಗೆಯಲಾಗಿದೆ.  ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!