ಮಂಡ್ಯ: ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಕಾರಿನಲ್ಲಿ ಕೊಂಡೊಯ್ಯುತ್ತಿದ್ದ ವ್ಯಕ್ತಿಯೊಬ್ಬರ ಹಣವನ್ನು ಕದ್ದೊಯ್ದ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಮಂಡ್ಯದ ಕೆ ಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ.
ಹಣ ಕಳೆದುಕೊಂಡ ವ್ಯಕ್ತಿ ಪಟ್ಟಣದ ನಿವಾಸಿ ಶಿಕ್ಷಕ ನಾಗರಾಜು. ಇಂದು ಪಟ್ಟಣದ ಕೆನರಾ ಬ್ಯಾಂಕ್ ನಿಂದ 7 ಲಕ್ಷ ಹಣ ಡ್ರಾ ಮಾಡಿದ್ದು, ತಮ್ಮ ಕಾರ್ ನ ಡಿಕ್ಕಿಯಲ್ಲಿಟ್ಟು ಮನೆಯ ಬಳಿ ತೆರಳಿದಿದ್ದಾರೆ. ಮನೆಯ ಮುಂದೆ ಕಾರ್ ನಿಲ್ಲಿಸಿ ಮನೆಯ ಬಾಗಿಲು ತೆರೆದು ಬರುವಷ್ಟರಲ್ಲಿ ನಿಲ್ಲಿಸಿದ್ದ ಕಾರ್ ಡೋರ್ ನ ಗಾಜು ಒಡೆದು ಕಾರಿನಲ್ಲಿದ್ದ ಹಣವನ್ನು ಕದ್ದೊಯ್ದಿದ್ದಾರೆ.
ಕಾರಿನ ಸೈರನ್ ಬಡಿದುಕೊಳ್ತಿರೋದನ್ನು ಕಂಡು ಹೋಗಿ ನೋಡುವಷ್ಟರಲ್ಲಿ ಹಣ ಕದ್ದ ದುಷ್ಕರ್ಮಿಗಳು ತಮ್ಮ ಪಲ್ಸರ್ ಬೈಕ್ ನಲ್ಲಿ ಪರಾರಿಯಾಗಿದ್ದಾರೆ. ತಕ್ಷಣವೇ ಕಾರಿನಲ್ಲಿ ಅವರನ್ನು ಹಿಂಬಾಲಿಸಿದರಾದರೂ ಪಟ್ಟಣದ ಹೇಮಾವತಿ ಬಡಾವಣೆಯ ಗಲ್ಲಿಯಲ್ಲಿ ಬೈಕ್ ಚಲಾಯಿಸಿಕೊಂಡು ಪರಾರಿಯಾಗಿದ್ದಾರೆ. ಈ ಘಟನೆಯ ಬಗ್ಗೆ ಹಣ ಕಳೆದುಕೊಂಡ ಶಿಕ್ಷಕ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.