Friday, March 29, 2024
spot_imgspot_img
spot_imgspot_img

ಬ್ರಹ್ಮಾವರ: ಕುಸಿದು ಬಿದ್ದು ಯುವ ಕಲಾವಿದ ಮೃತ್ಯು

- Advertisement -G L Acharya panikkar
- Advertisement -
vtv vitla

ಬ್ರಹ್ಮಾವರ: ಯುವರಂಗ ಕಲಾವಿದ, ಕಿರುತೆರೆಯ ಹಾಸ್ಯ ಕಲಾವಿದ ಅನಾರೋಗ್ಯದಿಂದ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕುಮ್ರಗೋಡು ಗ್ರಾಮದ ಜಂಬಾಡಿ ಎಂಬಲ್ಲಿ ನಡೆದಿದೆ.

ಕಾರ್ತಿಕ್ ಕುಮಾರ್ (31) ಮೃತಪಟ್ಟವರು. ಸುಮಾರು 1 ತಿಂಗಳಿನಿಂದ ವಿಪರೀತ ಕೆಮ್ಮು ಕಾಯಿಲೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಗುಣಮುಖರಾಗಿರುವುದಿಲ್ಲ. ಜ.22 ರಂದು ಮಧ್ಯಾಹ್ನದ ವೇಳೆ ಬ್ರಹ್ಮಾವರ ತಾಲೂಕಿನ ಕುಮ್ರಗೋಡು ಗ್ರಾಮದ ಜಂಬಾಡಿ ಎಂಬಲ್ಲಿ ಅವರ ಸಂಬಂಧಿಯ ದೈವದ ಮನೆಯಲ್ಲಿ ದರ್ಶನ ಆಗುತ್ತಿರುವಾಗ ಕಾರ್ತಿಕ್ ಕುಮಾರ್ ಅವರು ಕುರ್ಚಿಯಲ್ಲಿ ಕುಳಿತಿದ್ದವರು ಅಲ್ಲಿಯೇ ನಿತ್ರಾಣಗೊಂಡು ತೀವ್ರ ಅಸ್ವಸ್ಥಗೊಂಡಿದ್ದರು.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಮೃತರ ಸಂಬಂಧಿಸಿ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!