- Advertisement -
- Advertisement -
ಬ್ರಹ್ಮಾವರ : ಶಾಲಾ ಮಕ್ಕಳ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಉಳ್ಳೂರು ಗ್ರಾಮದ ಕುಂದಾಪುರ – ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಾರಾಯಣ ಪೂಜಾರಿ ( 65 ) ಮೃತಪಟ್ಟವರು. ಇವರು ನಿನ್ನೆ ಮಧ್ಯಾಹ್ನದ ವೇಳೆ ಜಾತಬೆಟ್ಟು ಕಡೆಗೆ ಹೋಗಲು ಕುಂದಾಪುರ – ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಯನ್ನು ದಾಟಲು ನಿಂತದ್ದರು. ಈ ವೇಳೆ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಶಾಲಾ ಮಕ್ಕಳ ಟೂರಿಸ್ಟ್ ಬಸ್ಸ್ನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಚಾಲಕ ಸುಬ್ರಮಣಿ ಎನ್ ಎಂಬಾತ ರಸ್ತೆ ದಾಟುತ್ತಿದ್ದ ನಾರಾಯಣ ಪೂಜಾರಿಯವರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ನಾರಾಯಣ ಪೂಜಾರಿಯವರು ರಸ್ತೆಯ ಮೇಲೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -