- Advertisement -
- Advertisement -
ಭಟ್ಕಳ: ಕನಕಪುರದಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು 10 ಜನ ಯುವಕರ ತಂಡ ಬಂದಿದ್ದರು. ಈ ವೇಳೆ ಮುರುಡೇಶ್ವರ ದೇವಸ್ಥಾನದಿಂದ 1 ಕಿ.ಮೀ ದೂರದಲ್ಲಿರುವ ತೂದಳ್ಳಿಯ ಸಮುದ್ರದಲ್ಲಿ ಈಜುತ್ತಿದ್ದಾಗ ಅಲೆಯ ಹೊಡೆತಕ್ಕೆ ಇಬ್ಬರು ನೀರಿನಲ್ಲಿ ಮುಳುಗಿದ್ದಾರೆ. ಈ ವೇಳೆ ಓರ್ವನನ್ನು ರಕ್ಷಣೆ ಮಾಡಲಾಗಿದೆ. ಇನ್ನೋರ್ವ ನೀರುಪಾಲಾಗಿದ್ದಾನೆ. ಮೃತ ಯುವಕ ರಘುನಂದನ (17) ಎನ್ನಲಾಗಿದೆ.
ಇನ್ನೊರ್ವ ಪ್ರವಾಸಿಗ ಬಸವರಾಜು(21) ಎನ್ನುವವರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ. ರಘುನಂದನ್ ಮಾತ್ರ ಅಲೆಯಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿದ್ದು, ಕೆಲ ಸಮಯದ ಬಳಿಕ ರಘುನಂದನ್ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -