Friday, April 26, 2024
spot_imgspot_img
spot_imgspot_img

ಭಟ್ಕಳ: ಮುರುಡೇಶ್ವರ ಪ್ರವಾಸಕ್ಕೆಂದು ಬಂದ ಯುವಕರ ತಂಡ; ಓರ್ವ ನೀರುಪಾಲು!

- Advertisement -G L Acharya panikkar
- Advertisement -
vtv vitla
vtv vitla
vtv vitla

ಭಟ್ಕಳ: ಕನಕಪುರದಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು 10 ಜನ ಯುವಕರ ತಂಡ ಬಂದಿದ್ದರು. ಈ ವೇಳೆ ಮುರುಡೇಶ್ವರ ದೇವಸ್ಥಾನದಿಂದ 1 ಕಿ.ಮೀ ದೂರದಲ್ಲಿರುವ ತೂದಳ್ಳಿಯ ಸಮುದ್ರದಲ್ಲಿ ಈಜುತ್ತಿದ್ದಾಗ ಅಲೆಯ ಹೊಡೆತಕ್ಕೆ ಇಬ್ಬರು ನೀರಿನಲ್ಲಿ ಮುಳುಗಿದ್ದಾರೆ. ಈ ವೇಳೆ ಓರ್ವನನ್ನು ರಕ್ಷಣೆ ಮಾಡಲಾಗಿದೆ. ಇನ್ನೋರ್ವ ನೀರುಪಾಲಾಗಿದ್ದಾನೆ. ಮೃತ ಯುವಕ ರಘುನಂದನ (17) ಎನ್ನಲಾಗಿದೆ.

vtv vitla

ಇನ್ನೊರ್ವ ಪ್ರವಾಸಿಗ ಬಸವರಾಜು(21) ಎನ್ನುವವರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ. ರಘುನಂದನ್ ಮಾತ್ರ ಅಲೆಯಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿದ್ದು, ಕೆಲ ಸಮಯದ ಬಳಿಕ ರಘುನಂದನ್ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!