
ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶಕ್ಕೆ ಪ್ರವೇಶಕ್ಕೆ ಮುನ್ನ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ ಬಂದಿರುವ ಬಗ್ಗೆ ವರದಿಯಾಗಿದೆ. ರಾಹುಲ್ ಗಾಂಧಿ ಅವರಿಗೆ ಮಧ್ಯಪ್ರದೇಶದ ಇಂದೋರ್ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಜುನಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದೋರ್ನ ಸಿಹಿತಿಂಡಿ ಅಂಗಡಿಯೊಂದರ ಹೊರಗೆ ರಾಹುಲ್ ಗಾಂಧಿಯನ್ನು ಕೊಲ್ಲುವುದಾಗಿ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ. ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡಲು ಪ್ರಾರಂಭಿಸಿದ್ದಾರೆ ಮತ್ತು ಪತ್ರವನ್ನು ಸಿಹಿತಿಂಡಿ ಅಂಗಡಿಯ ಹೊರಗೆ ಬಿಟ್ಟುಹೋದ ವ್ಯಕ್ತಿಯನ್ನು ಹುಡುಕುತ್ತಿದ್ದಾರೆ.

ಇದೀಗ ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 507 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರು ಸಾವರ್ಕರ್ ಗೆ ಬಗ್ಗೆ ಹೇಳಿಕೆ ಕೊಟ್ಟ ಒಂದು ದಿನದ ನಂತರ ಬೆದರಿಕೆ ಪತ್ರ ಬಂದಿದೆ, ಅವರು ಬ್ರಿಟಿಷ್ ಆಡಳಿತಗಾರರಿಗೆ ಸಹಾಯ ಮಾಡಿದ್ದಾರೆ ಮತ್ತು ಭಯದಿಂದ ಅವರಿಗೆ ಕ್ಷಮಾದಾನ ಅರ್ಜಿಯನ್ನು ಬರೆದಿದ್ದಾರೆ ಎಂದು ಹೇಳಿದ್ದರು.
- ಪಾರ್ಟ್ಟೈಮ್ ಕೆಲಸದ ಆಮಿಷ: ಹಣ ಪಡೆದು ವಂಚನೆ; ಪ್ರಕರಣ ದಾಖಲು
- ಒಂದೇ ಕ್ಷಣದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬ; ಕೆರೆಗೆ ಬಿದ್ದು ಅವಳಿ ಮಕ್ಕಳ ಸಾವು
- ದಾಖಲೆ ಇಲ್ಲದೇ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್: ಎಂಆರ್ಪಿಎಲ್ ಉದ್ಯೋಗಿ ಸೇರಿ ಇಬ್ಬರ ವಿರುದ್ಧ ಎಫ್ಐಆರ್, ಇಬ್ಬರು ಕಾನ್ಸ್ಟೇಬಲ್ ಅಮಾನತು
- ಸಂಚರಿಸುತ್ತಿದ್ದ ಲಾರಿ ಬೆಂಕಿಗಾಹುತಿ-ಡೀಸೆಲ್ ಸೋರಿಕೆಯಿಂದ ಅನಾಹುತ-ಶಿರಾಡಿ ಘಾಟ್ ನಲ್ಲಿ ನಡೆದ ಘಟನೆ
- ಮಂಗಳೂರಿನಲ್ಲಿ ನಡೆಯುವ ಕ್ಯಾಬೆನೆಟ್ ಸಭೆಗೆ ಮುನ್ನ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಸಿದ್ಧಪಡಿಸಿ: ಮುಖ್ಯಮಂತ್ರಿ ಡಿಕೆಶಿ ಸೂಚನೆ









