- Advertisement -
- Advertisement -
ಪುತ್ತೂರು: ಖಾಸಗಿ ಶಿಕ್ಷಣ ಸಂಸ್ಥೆಯ ಎರಡು ಭಿನ್ನ ಕೋಮಿನ ವಿದ್ಯಾರ್ಥಿಗಳ ತಂಡಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಭಿನ್ನ ಕೋಮಿನ ವಿದ್ಯಾರ್ಥಿಗಳ ಎರಡು ತಂಡಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಮನಸ್ತಾಪ ಹೊಡೆದಾಟದ ಹಂತಕ್ಕೆ ತಲುಪಿದೆ. ಇಮ್ರಾನ್ ಎಂಬಾತ ಹೊರಗಿನಿಂದ ಯುವಕರನ್ನು ಕರೆತಂದು ಹಲ್ಲೆ ನಡೆಸಿದ್ದಾನೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ವಿದ್ಯಾರ್ಥಿಗಳ ಹೊಡೆದಾಟ ಇಲ್ಲಿಗೆ ಮುಗಿಯದೆ ಬಸ್ ನಿಲ್ದಾಣಕ್ಕೆ ಆಗಮಿಸಿ ತಂಡ ಅಲ್ಲಿಯೂ ಪರಸ್ಪರ ಹೊಡೆದಾಟ ನಡೆದಿರುವುದಾಗಿ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಒಂದು ತಂಡದ ಇಬ್ಬರು ವಿದ್ಯಾರ್ಥಿಗಳಾದ ಕಾರ್ತಿಕ್ ಅಜ್ಜಿನಡ್ಕ ಮತ್ತು ಲಿತೀಶ್ ಕಬಕ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ.
- Advertisement -